/* Change button hover color to red */
button:hover,
.wp-block-button__link:hover,
input[type="submit"]:hover {
    background-color: red !important;
    color: #fff !important; /* Makes text white for contrast */
}

  • Home
  • ಜಿಲ್ಲೆ
  • ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನಿರ್ದೇಶಕರ ಅಯ್ಕೆ
Image

ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನಿರ್ದೇಶಕರ ಅಯ್ಕೆ

ಕೊಳ್ಳೇಗಾಲ. ಸತ್ತೇಗಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಕ್ಕೆ ಭಾನುವಾರ ಚುನಾವಣೆ ನಡೆಯಿತು.

ಗ್ರಾಮದಲ್ಲಿ ನಡೆದ ಚುನಾವಣೆಯಲ್ಲಿ 8 ಮಂದಿ ನಿರ್ದೇಶಕರು ಅಮೋಘವಾಗಿ ಜಯಗಳಿಸಿದ್ದಾರೆ. ಅವಿರೋಧವಾಗಿ 3 ನಿರ್ದೇಶಕರು ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ನಾಗೇಶ್ ಅವರು ಘೋಷಣೆ ಮಾಡಿದರು.
ಈ ಪೈಕಿ ಇಂದು ನಡೆದ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದವರ ಪೈಕಿ ಸಾಲಗಾರರ ಕ್ಷೇತ್ರದ ಸಾಮಾನ್ಯ ಸ್ಥಾನದಲ್ಲಿ ಆರ್.ನವೀನ್ ಕುಮಾರ್ (128), ಭಾಸ್ಕರ (122), ಎಂ.ಮಲ್ಲೇಶ (116), ಮಲ್ಲಿಕಾರ್ಜುನ (114), ಎಂ.ಶಂಕರೇಗೌಡ (114) ಜಯಗಳಿಸಿದ್ದಾರೆ.
ಇವರ ವಿರುದ್ಧ ಸ್ಪರ್ಧಿಸಿದ್ದ ಪಿ.ಲೋಕೇಶ್ (109)
ಶಿವಕುಮಾರ್(114) ಮತಗಳನ್ನು ಪಡೆದು ಸೋಲು ಅನುಭವಿಸಿದ್ದರು.

ಮಹಿಳಾ ಮೀಸಲು ಸ್ಥಾನದಿಂದ ದೊಡ್ಡಮ್ಮ(118), ಮಂಜುಳ.ಎಸ್(102) ಗೆಲುವು ಸಾಧಿಸಿದ್ದಾರೆ.
ಇವರ ವಿರುದ್ಧ ಸ್ಪರ್ಧಿಸಿದ್ದ ಸರೋಜಮ್ಮ (67) ಮತ ಪಡೆದು ಸೋಲು ಅನುಭವಿಸಿದ್ದರು.

ಸಾಲಗಾರರಲ್ಲದ ಕ್ಷೇತ್ರದಿಂದ ಸೋಮಶೇಖರ್.ಜಿ (208) ಮತ ಪಡೆದು ಜಯಗಳಿಸಿದರು. ಇವರ ವಿರುದ್ಧ ಸ್ಪರ್ಧಿ ಗಳಾದ ಜಯರಾಜು(161) ಹಾಗೂ ಪ್ರಕಾಶ(5) ಮತಗಳನ್ನು ಪಡೆಯುವ ಮೂಲಕ ಸೋಲು ಅನುಭವಿಸಿದರು.

ಪರಿಶಿಷ್ಟ ಜಾತಿ ಮೀಸಲು ಸ್ಥಾನದಿಂದ ಸ್ಪರ್ಧಿಸಿದ್ದ ಜಿ.ಶಾಂತರಾಜು(115) ಗೆಲವು ಗಳಿಸಿದ್ದಾರೆ. ಇವರ ವಿರುದ್ಧ ಸ್ಪರ್ಧಿ ಮಹದೇವಯ್ಯ (114) ಮತಗಳ ಪಡೆದು ಸೋಲು ಅನುಭವಿಸಿದರು.

ಬಿಸಿಎಂ ‘ಎ’ ಕ್ಷೇತ್ರದಿಂದ ಕಾಂತು, ಬಿಸಿಎಂ ‘ಬಿ’ ಕ್ಷೇತ್ರದಿಂದ ರಾಜುಗೋಪಾಲ್ ಹಾಗೂ ಪರಿಶಿಷ್ಟ ಪಂಗಡ ಕ್ಷೇತ್ರದಿಂದ ಚಲುವನಾಯಕ ಅವಿರೋಧವಾಗಿ ಆಯ್ಕೆಯಾದವರು.
ಲಾಟರಿ ಮೂಲಕ ಇಬ್ಬರ ಗೆಲುವು: ಸಾಲಗಾರರ ಕ್ಷೇತ್ರದ ಸಾಮಾನ್ಯ ಸ್ಥಾನದಲ್ಲಿ ಸ್ಪರ್ಧಿಸಿದ್ದ ಮಲ್ಲಿಕಾರ್ಜುನ, ಎಂ.ಶಂಕರೇಗೌಡ ಹಾಗೂ ಶಿವಕುಮಾರ್ ಮೂವರಿಗೆ 114 ಮತಗಳು ಬಂದಿದ್ದವು. ಅದರಲ್ಲಿ ಇಬ್ಬರಿಗೆ ಮಾತ್ರ ಗೆಲುವಿಗೆ ಅವಕಾಶ ಇದ್ದುದರಿಂದ ಲಾಟರಿ ಮೂಲಕ ಮಲ್ಲಿಕಾರ್ಜುನ ಹಾಗೂ ಶಂಕರೇಗೌಡ ರವರು ಗೆಲುವು ಸಾಧಿಸಿದ್ದಾರೆ.

ಈ ವೇಳೆ ಸ್ಪರ್ಧೆ ಮಾಡಿ ಜಯಗಳಿಸಿದ್ದ ಎಲ್ಲಾ ನೂತನ ನಿರ್ದೇಶಕರುಗಳಿಗೆ ಹಾರ ಹಾಕಿ ಸನ್ಮಾನಿಸಿ, ಪ್ರಮಾಣ ಪತ್ರವನ್ನು ಚುನಾವಣಾಧಿಕಾರಿ ನಾಗೇಶ್ ನೀಡಿದರು. ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಂಗಾಂಬಿಕಾ ಹಾಗೂ ಗ್ರಾಮದ ಮುಖಂಡರು ಇದ್ದರು.

ವರದಿ: ನಿಂಪು ಸುರೇಶ್

Releated Posts

ಕೊಳ್ಳೇಗಾಲ: ಪೌರಕಾರ್ಮಿಕರಿಗೆ ಊಟ ಬಡಿಸಿದ ಶಾಸಕ ಎ.ಆರ್. ಕೃಷ್ಣಮೂರ್ತಿ

ಕೊಳ್ಳೇಗಾಲ. ಸಮಾಜದಲ್ಲಿ ಕೊಳಕು ಮುಕ್ತ ಪ್ರದೇಶವಾಗಲು ಪೌರಕಾರ್ಮಿಕರು ಮುಖ್ಯ ಕಾರಣವಾಗಿದೆ ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ಅವರು ಹೇಳಿದರು. ಪಟ್ಟಣದ ಸಿಡಿಎಸ್ ಭವನದಲ್ಲಿ ಬುಧವಾರ ಪೌರ…

ByByN Rajesh Feb 11, 2026

ಕೊಳ್ಳೇಗಾಲ ನಗರಸಭೆ – ಜಿಲ್ಲಾಧಿಕಾರಿ ಶ್ರೀ ರೂಪ ಅವರಿಂದ ಉಳಿತಾಯ ಬಜೆಟ್ ಮಂಡನೆ

ಕೊಳ್ಳೇಗಾಲ ನಗರಸಭೆಯ ೨೦೨೬-೨೭ನೇ ಸಾಲಿನ ಬಜೆಟ್‌ನ ಪಕ್ಷಿ ನೋಟ ಕೊಳ್ಳೇಗಾಲ, ಫೆ, ೧೦- ಕೊಳ್ಳೇಗಾಲ ನಗರಸಭೆಯ ಸಭಾಂಗಣದಲ್ಲಿ ಶಾಸಕ ಎ.ಆರ್. ಕೃಷ್ಣಮೂರ್ತಿಯವರ ಅಧ್ಯಕ್ಷತೆಯಲ್ಲಿ ಫೆ.೧೦…

ByByN Rajesh Feb 10, 2026

ಕೊಳ್ಳೇಗಾಲ : ಗ್ಯಾರೆಂಟಿ ಯೋಜನೆಗಳಿಂದ ನವ ಕರ್ನಾಟಕ ನಿರ್ಮಾಣ – ಶಾಸಕ ಎ.ಆರ್.ಕೃಷ್ಣಮೂರ್ತಿ

ಸರ್ಕಾರದ ಅಭಿವೃದ್ಧಿ ಯೋಜನೆ, ಕಾರ್ಯಕ್ರಮಗಳು ನವಕರ್ನಾಟಕ ನಿರ್ಮಾಣಕ್ಕೆ ಸಹಕಾರಿ: ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಕೊಳ್ಳೇಗಾಲ. ರಾಜ್ಯಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಜನರ ಅಭಿವೃದ್ಧಿಗಾಗಿ…

ByByN Rajesh Jan 17, 2026

ಬಿಳಿಗಿರಿರಂಗನ ಬೆಟ್ಟ: ಅಗ್ನಿ ದುರಂತದಲ್ಲಿ ಅಂಗಡಿ ಕಳೆದು ಕೊಂಡವರಿಗೆ ಹೊಸದಾಗಿ ಅಂಗಡಿ ನಿರ್ಮಾಣ

ಬೆಂಕಿ ಅನಾಹುತ ನಿರಾಶ್ರಿತರಿಗೆ ಮಳಿಗೆ ನಿರ್ಮಾಣದ ಭರವಸೆ ಶಾಸಕ ಎಆರ್ ಕೃಷ್ಣಮೂರ್ತಿ ಯಳಂದೂರು ಜ. 12ಬಿಳಿಗಿರಿರಂಗನ ಬೆಟ್ಟದ ಬಸ್ ನಿಲ್ದಾಣದ ಬಳಿ ಅಂಗಡಿ ಮಳಿಗೆಗಳಿಗೆ…

ByByN Rajesh Jan 13, 2026

Leave a Reply

Your email address will not be published. Required fields are marked *

Scroll to Top