/* Change button hover color to red */
button:hover,
.wp-block-button__link:hover,
input[type="submit"]:hover {
    background-color: red !important;
    color: #fff !important; /* Makes text white for contrast */
}

  • Home
  • ಜಿಲ್ಲೆ
  • ಹನೂರು – ರಾಮಾಪುರದಲ್ಲಿ ಯಶಸ್ವಿಯಾಗಿ ನಡೆದ ಮಾಸಿಕ ಸಂತೆ
Image

ಹನೂರು – ರಾಮಾಪುರದಲ್ಲಿ ಯಶಸ್ವಿಯಾಗಿ ನಡೆದ ಮಾಸಿಕ ಸಂತೆ

ಹನೂರು : ತಾಲ್ಲೂಕು ಪಂಚಾಯಿತಿ ವತಿಯಿಂದ ಸಂಜೀವಿನಿ ಎನ್ ಆರ್ ಎಂ ಎಲ್ ಯೋಜನೆಯಡಿ ತಾಲೂಕಿನ ರಾಮಾಪುರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ಹತ್ತಿರ ಮಾಸಿಕ ಸಂತೆಯನ್ನು ರಾಮಾಪುರ ಪೊಲೀಸ್ ಸಬ್ ಇನ್ಸ್ ಫೆಕ್ಟರ್
ಈಶ್ವರ್ ರವರು ಉದ್ಘಾಟಿಸಿದರು.

ನಂತರ ಮಾತನಾಡಿದ ಈಶ್ವರ್ ತಾಲ್ಲೂಕಿನ ವಿವಿದ ಗ್ರಾಮ ಪಂಚಾಯಿತಿಗಳ ಮಹಿಳಾ ಸ್ವ ಸಹಾಯ ಗುಂಪುಗಳ ಒಕ್ಕೂಟಗಳಿಂದ ಮಹಿಳೆಯರು ಉತ್ಪಾದನೆ ಮಾಡಿರುವ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಿಸುವ ಸಲುವಾಗಿ ಮಾಸಿಕ ಸಂತೆ ಏರ್ಪಡಿಸುತ್ತಿರುವುದು ಮಹಿಳೆಯರಿಗೆ ತುಂಬಾ ಉಪಯೋಗವಾಗುತ್ತದೆ.

ಈ ಪ್ರಕ್ರಿಯೆಯು ಮಹಿಳೆಯರ ಆರ್ಥಿಕ ಅಭಿವೃದ್ಧಿಗೆ ಸಹಾಯಕವಾಗಿದ್ದು, ಇದರಿಂದ ಮಹಿಳೆಯರು ಸ್ವಾಲಂಬನೆಯಿಂದ ಜೀವನ ನಿರ್ವಹಣೆ ಮಾಡಲು ಅನುಕೂಲವಾಗಲಿದೆ. ಮಹಿಳೆಯರು ಕುಟುಂಬಕ್ಕೆ ಮಾದರಿಯಾಗಿದ್ದು, ಮಾದಕ ಮುಕ್ತ ಕರ್ನಾಟಕ ಅಭಿಯಾನದಡಿ ಕುಟುಂಬಸ್ಥರು ಮತ್ತು ನೆರೆಹೊರೆಯವರು ಮಾದಕ ವ್ಯಸನದಿಂದ ಮುಕ್ತಗೊಳಿಸಲು ಪ್ರಯತ್ನಿಸಿ. ಮುಂದಿನ ಯುವಪೀಳಿಗೆ ಮಾದಕ ವಸ್ತುಗಳ ಚಟದಿಂದ ಮುಕ್ತರಾಗಲು ಪಣತೊಡಬೇಕೆಂದು ತಿಳಿಸಿದರು.

ಬಾಲ್ಯವಿವಾಹ ಮತ್ತು ಪೋಕ್ಸೋ ಪ್ರಕರಣಗಳು ಸಾರ್ವಜನಿಕವಾಗಿ ನಿಮ್ಮ ಹತ್ತಿರ ನೆರೆಹೊರೆಯಲ್ಲಿ ಕಂಡುಬಂದರೆ ತಕ್ಷಣ ಸರ್ಕಾರಿ ಸಹಾಯವಾಣಿಗೆ ಕರೆಮಾಡಿ ತಿಳಿಸಬೇಕೆಂದು ಎಲ್ಲರಿಗೂ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ತಾಲ್ಲೂಕು ಎನ್.ಆರ್.ಎಲ್.ಎಂ ವಲಯ ಮೇಲ್ವಿಚಾರಕರಾದ ಕುಮಾರಿ.ಸಿ, ತಾಲ್ಲೂಕು ವ್ಯವಸ್ಥಾಪಕರಾದ ಲಿಂಗರಾಜು.ಬಿ, ಪೋಲೀಸ್ ಇಲಾಖೆಯ ಸಿಬ್ಬಂದಿಗಳು ತಾಲ್ಲೂಕು ಸಂಜೀವಿನಿ ಸಿಬ್ಬಂದಿಗಳು, ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳ ಸಮುದಾಯ ಸಂಪನ್ಮೂಲ ವ್ಯಕ್ತಿಗಳು ಉಪಸ್ಥಿತರಿದ್ದರು.

ವರದಿ : ಸಾಗರ್ ನಿಂಪು

Releated Posts

ಹೊಸ ಹಂಪಾಪುರ ಗ್ರಾಮದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಕೊಳ್ಳೇಗಾಲ :ಹೊಸ ಹಂಪಾಪುರದ ಕರವೇ ಗ್ರಾಮ ಘಟಕದಿಂದ ಕನ್ನಡ ರಾಜ್ಯೋತ್ಸವ ಆಚರಣೆ ಕೊಳ್ಳೇಗಾಲ:ತಾಲೂಕಿನ ಹೊಸ ಹಂಪಾಪುರ ಗ್ರಾಮದಲ್ಲಿ ಇಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್…

ByByN RajeshNov 30, 2025

ಕೊಳ್ಳೇಗಾಲ ತಾಲ್ಲೂಕಿನ ಮಧುವನಹಳ್ಳಿ ಗ್ರಾಮದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಕೊಳ್ಳೇಗಾಲ. ಜಯಕರ್ನಾಟಕ ಸಂಘಟನೆ ಮಧುವನಹಳ್ಳಿ ಗ್ರಾಮ ಘಟಕ ವತಿಯಿಂದ ಭಾನುವಾರ 70 ನೇ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಣೆ ಮಾಡಿದರು. ತಾಲ್ಲೂಕಿನ ಮಧುವನಹಳ್ಳಿ ಗ್ರಾಮದಲ್ಲಿ…

ByByN RajeshNov 30, 2025

ಕೊಳ್ಳೇಗಾಲದ ವಸಂತ ಕುಮಾರಿ ಕಾಲೇಜಿನಲ್ಲಿ ಯುವ ಸೌರಭ ಕಾರ್ಯಕ್ರಮ

ಕೊಳ್ಳೇಗಾಲ. ಪಟ್ಟಣದ ಎಸ್.ವಿ.ಕೆ ಬಾಲಕಿಯರ ಪದವಿಪೂರ್ವ ಕಾಲೇಜು ಆವರಣದಲ್ಲಿ ನಡೆದ ಯುವ ಸೌರಭ-2025 ಕಾರ್ಯಕ್ರಮವನ್ನು ಶಾಸಕ ಎ.ಆರ್.ಕೃಷ್ಣಮೂರ್ತಿ ಅವರು ಉದ್ಘಾಟನೆ ಮಾಡಿದರು. ಜಿಲ್ಲಾಡಳಿತ, ಜಿ.ಪಂ…

ByByN RajeshNov 30, 2025

ಪ್ರತಿಭಾ ಕಾರಂಜಿಯಲ್ಲಿ ಕೆಂಪನಪಾಳ್ಯ ಶಾಲಾ ಮಕ್ಕಳಿಗೆ ಅತಿ ಹೆಚ್ಚು ಬಹುಮಾನ

ಕೊಳ್ಳೇಗಾಲ: ಕೊಳ್ಳೇಗಾಲ ತಾಲೂಕಿನ ಕೆಂಪನಪಾಳ್ಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳು ಪ್ರತಿಭಾ ಕಾರಂಜಿಯಲ್ಲಿ ಪಾಲ್ಗೊಂಡು ಅತಿ ಹೆಚ್ಚು ಬಹುಮಾನವನ್ನು ಪಡೆದು ಕೊಂಡಿದ್ದಾರೆ. ಕೆಂಪನಪಾಳ್ಯ…

ByByN RajeshNov 29, 2025

Leave a Reply

Your email address will not be published. Required fields are marked *

Scroll to Top