/* Change button hover color to red */
button:hover,
.wp-block-button__link:hover,
input[type="submit"]:hover {
    background-color: red !important;
    color: #fff !important; /* Makes text white for contrast */
}

  • Home
  • ಜಿಲ್ಲೆ
  • ಕೊಳ್ಳೇಗಾಲ ದಿಂದ ಅಂಬೇಡ್ಕರ್ ಧೀಕ್ಷಾ ಭುಮಿಗೆ ಹೊರಟ ವಾಹನಗಳಿಗೆ ಶಾಸಕ ಎ.ಆರ್.ಕೃಷ್ಣಮೂರ್ತಿ ಹಸಿರು ನಿಶಾನೆ
Image

ಕೊಳ್ಳೇಗಾಲ ದಿಂದ ಅಂಬೇಡ್ಕರ್ ಧೀಕ್ಷಾ ಭುಮಿಗೆ ಹೊರಟ ವಾಹನಗಳಿಗೆ ಶಾಸಕ ಎ.ಆರ್.ಕೃಷ್ಣಮೂರ್ತಿ ಹಸಿರು ನಿಶಾನೆ

ಕೊಳ್ಳೇಗಾಲ ಸುದ್ದಿ

ದೀಕ್ಷಾಭೂಮಿ ಯಾತ್ರೆಗೆ ಚಾಲನೆ ನೀಡಿದ ಶಾಸಕ ಎ. ಆರ್ ಕೃಷ್ಣಮೂರ್ತಿ

ಡಾ. ಬಿ. ಆರ್. ಅಂಬೇಡ್ಕರ್ ರವರು ಲಕ್ಷಾಂತರ ಅನುಯಾಯಿಗಳೊಡನೆ ಬೌದ್ಧ ದಮ್ಮ ದೀಕ್ಷೆ ಪಡೆದ ದೀಕ್ಷಾ ಭೂಮಿಯಲ್ಲಿ ನಡೆಯಲಿರುವ ಧಮ್ಮದೀಕ್ಷಾ ಮಹೋತ್ಸವ ಕಾರ್ಯಕ್ರಮವನ್ನು ವೀಕ್ಷಿಸಲು ಜಿಲ್ಲೆಯಿಂದ ಸಾವಿರಾರು ಸಂಖ್ಯೆಯಲ್ಲಿ ಅಂಬೇಡ್ಕರ್ ಅನುಯಾಯಿಗಳು ದೀಕ್ಷಾ ಭೂಮಿ ಯಾತ್ರೆಗೆ ತೆರಳಿದರು,
ದೀಕ್ಷಾಭೂಮಿ ಯಾತ್ರೆಗೆ ಹೊರಟ ಬಸ್ಸುಗಳಿಗೆ ಕೊಳ್ಳೇಗಾಲ ಶಾಸಕ ಎಆರ್ ಕೃಷ್ಣಮೂರ್ತಿಯವರು ಹಸಿರು ನಿಶಾನೆಯನ್ನು ತೋರಿಸಿ ಚಾಲನೆಯನ್ನು ನೀಡಿದರು

ಈ ಸಂದರ್ಭದಲ್ಲಿ ಶಾಸಕರು ಎ. ಆರ್ ಕೃಷ್ಣಮೂರ್ತಿಯವರು ಮಾತನಾಡಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ
ನಾಯಕತ್ವದಲ್ಲಿ 2023 ರಂದು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ಸರ್ಕಾರದಲ್ಲಿ ಎಚ್ ಸಿ. ಮಹದೇವಪ್ಪ ರವರ ಸಮಾಜ ಕಲ್ಯಾಣ ಸಚಿವರಾಗಿ ಅಧಿಕಾರ ವಹಿಸಿಕೊಂಡ ಮೇಲೆ ಅನೇಕ ಐತಿಹಾಸಿಕ ತೀರ್ಮಾನಗಳನ್ನು ಕೈಗೊಂಡು ರಾಜ್ಯದಲ್ಲಿ ಸಂವಿಧಾನದ ಪೀಠಿಕೆಯನ್ನು ಓದುವ ಅವಕಾಶ ಮಾಡಿದೆ
ನಮ್ಮ ಸರ್ಕಾರದ ಕಾರ್ಯಕ್ರಮ ಮತ್ತು ಸದನದಲ್ಲಿಯೂ ಕೂಡ ಸಂವಿಧಾನದ ಪೀಠಿಕೆಯನ್ನು ಓದುವ ಮೂಲಕ ಸಭೆಯನ್ನು ಪ್ರಾರಂಭಿಸಲಾಗುತ್ತದೆ


ಹಾಗೂ ರಾಜ್ಯಾದಂತ್ಯ ಮಾನವ ಸರಪಳಿಯನ್ನು ಮಾಡಿ ಐತಿಹಾಸಿಕ ಕಾರ್ಯವನ್ನು ಮಾಡಲಾಗಿದೆ ಕಳೆದ ಮೂರು ವರ್ಷಗಳಿಂದ ನಮ್ಮ ಚಾಮರಾಜನಗರ ಜಿಲ್ಲೆಯ 10 ಬಸ್ಸುಗಳಲ್ಲಿ ದೀಕ್ಷಾ ಭೂಮಿಗೆ ಹೊರಡುವ ಅವಕಾಶ ಮಾಡಲಾಗಿದೆ,
ಜಿಲ್ಲೆಯ ಪರಿಶಿಷ್ಟ ಜಾತಿ ಸಮುದಾಯದವರು ದೀಕ್ಷಾ ಭೂಮಿಗೆ ಹೊರಡಲು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ಮೂಲಕ ಅರ್ಜಿಯನ್ನು ಸಲ್ಲಿಸಿ ನೊಂದಣಿ ಮಾಡಿಸಿಕೊಂಡು ದೀಕ್ಷಾ ಭೂಮಿಗೆ ಹೊರಡುವ
ಅವಕಾಶ ಮಾಡಿಕೊಡಲಾಗಿದ್ದು
ದೀಕ್ಷಾ ಭೂಮಿಗೆ ಚಾಲನೆಯನ್ನು ಕೊಡಲಾಗಿದೆ


ಬಾಬಾ ಸಾಹೇಬ್ ಅಂಬೇಡ್ಕರ್ ರವರು ದೀಕ್ಷೆ ಪಡೆದ ದೀಕ್ಷಾಭೂಮಿಯನ್ನು ನೋಡುವ ಭಾಗ್ಯವನ್ನು ನೀಡಲಾಗಿದೆ ಹಾಗೂ ಅವರು ದೀಕ್ಷಾ ಭೂಮಿ ಯಾತ್ರೆಯನ್ನು ಮುಗಿಸಿ ಕ್ಷೇಮವಾಗಿ ಮನೆಗೆ ತಲುಪುವ ವರೆಗೂ ಜವಾಬ್ದಾರಿಯನ್ನು ವಹಿಸಲಾಗಿದೆ ಎಂದರು

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಅಧಿಕಾರಿ ಕೇಶವಮೂರ್ತಿ, ನಗರಸಭೆ ಸದಸ್ಯರಾದ ಶಾಂತರಾಜು, ಮಂಜುನಾಥ್, ಪಿ. ಕೃಷ್ಣರಾಜು ರಮೇಶ್ ಸಿದ್ದಾರ್ಥ, ಪೂಜಯ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೋಟೇಶ್, ಹಾಗೂ ಇನ್ನಿತರರು ಇದ್ದರು

ವರದಿ : ಎನ್.ಸುರೇಶ್

Releated Posts

ಕೊಳ್ಳೇಗಾಲ: ಪೌರಕಾರ್ಮಿಕರಿಗೆ ಊಟ ಬಡಿಸಿದ ಶಾಸಕ ಎ.ಆರ್. ಕೃಷ್ಣಮೂರ್ತಿ

ಕೊಳ್ಳೇಗಾಲ. ಸಮಾಜದಲ್ಲಿ ಕೊಳಕು ಮುಕ್ತ ಪ್ರದೇಶವಾಗಲು ಪೌರಕಾರ್ಮಿಕರು ಮುಖ್ಯ ಕಾರಣವಾಗಿದೆ ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ಅವರು ಹೇಳಿದರು. ಪಟ್ಟಣದ ಸಿಡಿಎಸ್ ಭವನದಲ್ಲಿ ಬುಧವಾರ ಪೌರ…

ByByN Rajesh Feb 11, 2026

ಕೊಳ್ಳೇಗಾಲ ನಗರಸಭೆ – ಜಿಲ್ಲಾಧಿಕಾರಿ ಶ್ರೀ ರೂಪ ಅವರಿಂದ ಉಳಿತಾಯ ಬಜೆಟ್ ಮಂಡನೆ

ಕೊಳ್ಳೇಗಾಲ ನಗರಸಭೆಯ ೨೦೨೬-೨೭ನೇ ಸಾಲಿನ ಬಜೆಟ್‌ನ ಪಕ್ಷಿ ನೋಟ ಕೊಳ್ಳೇಗಾಲ, ಫೆ, ೧೦- ಕೊಳ್ಳೇಗಾಲ ನಗರಸಭೆಯ ಸಭಾಂಗಣದಲ್ಲಿ ಶಾಸಕ ಎ.ಆರ್. ಕೃಷ್ಣಮೂರ್ತಿಯವರ ಅಧ್ಯಕ್ಷತೆಯಲ್ಲಿ ಫೆ.೧೦…

ByByN Rajesh Feb 10, 2026

ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನಿರ್ದೇಶಕರ ಅಯ್ಕೆ

ಕೊಳ್ಳೇಗಾಲ. ಸತ್ತೇಗಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಕ್ಕೆ ಭಾನುವಾರ ಚುನಾವಣೆ ನಡೆಯಿತು. ಗ್ರಾಮದಲ್ಲಿ ನಡೆದ ಚುನಾವಣೆಯಲ್ಲಿ 8…

ByByN Rajesh Feb 9, 2026

ಕೊಳ್ಳೇಗಾಲ : ಗ್ಯಾರೆಂಟಿ ಯೋಜನೆಗಳಿಂದ ನವ ಕರ್ನಾಟಕ ನಿರ್ಮಾಣ – ಶಾಸಕ ಎ.ಆರ್.ಕೃಷ್ಣಮೂರ್ತಿ

ಸರ್ಕಾರದ ಅಭಿವೃದ್ಧಿ ಯೋಜನೆ, ಕಾರ್ಯಕ್ರಮಗಳು ನವಕರ್ನಾಟಕ ನಿರ್ಮಾಣಕ್ಕೆ ಸಹಕಾರಿ: ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಕೊಳ್ಳೇಗಾಲ. ರಾಜ್ಯಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಜನರ ಅಭಿವೃದ್ಧಿಗಾಗಿ…

ByByN Rajesh Jan 17, 2026

Leave a Reply

Your email address will not be published. Required fields are marked *

Scroll to Top