/* Change button hover color to red */
button:hover,
.wp-block-button__link:hover,
input[type="submit"]:hover {
    background-color: red !important;
    color: #fff !important; /* Makes text white for contrast */
}

  • Home
  • ಜಿಲ್ಲೆ
  • ಭೀಮನಗರದ ದೊಡ್ಡ ಯಜಮಾನರು ಮತ್ತು ಅಂಬೇಡ್ಕರ್ ಸಂಘದ ಅಧ್ಯಕ್ಷರ ಪತ್ರಿಕಾ ಹೇಳಿಕೆಗೆ ಮನ್ನಣೆ ನೀಡದ ಮುಖಂಡರು : ಅಂಬೇಡ್ಕರ್ ಭವನ ಉದ್ಘಾಟನೆ ಮುಂದೂಡಿಕೆ
Image

ಭೀಮನಗರದ ದೊಡ್ಡ ಯಜಮಾನರು ಮತ್ತು ಅಂಬೇಡ್ಕರ್ ಸಂಘದ ಅಧ್ಯಕ್ಷರ ಪತ್ರಿಕಾ ಹೇಳಿಕೆಗೆ ಮನ್ನಣೆ ನೀಡದ ಮುಖಂಡರು : ಅಂಬೇಡ್ಕರ್ ಭವನ ಉದ್ಘಾಟನೆ ಮುಂದೂಡಿಕೆ

ಕೊಳ್ಳೇಗಾಲ: ಅಪೂರ್ಣ ಗೊಂಡಿರುವ ಡಾ.ಬಿ.ಆರ್. ಅಂಬೇಡ್ಕರ್ ಭವನವನ್ನು ಇದೇ ತಿಂಗಳು 29 ರಂದು ಉದ್ಘಾಟನೆ ಮಾಡುವುದಾಗಿ ಪತ್ರಿಕಾ ಗೋಷ್ಠಿಯಲ್ಲಿ ಹೇಳಿಕೆ ನೀಡಿದ್ದ ಭೀಮನಗರ ದೊಡ್ಡ ಯಜಮಾನ ಮತ್ತು ಅಂಬೇಡ್ಕರ್ ಸಂಘದ ಅಧ್ಯಕ್ಷರ ಹೇಳಿಕೆಯನ್ನು ಭೀಮನಗರದ ಮುಖಂಡರು ಒಮ್ಮತದಿಂದ ವಿರೋಧಿಸಿದ್ದು, ಬಹುತೇಕ ಮುಖಂಡರ ಅಭಿಪ್ರಾಯವನ್ನು ಸ್ವೀಕರಿಸಿ ಭವನದ ಉದ್ಘಾಟನೆ ದಿನಾಂಕವನ್ನು ಮುಂದೂಡಲಾಯಿತು.

ಭೀಮನಗರದ ಬಸವನಗುಡಿ ದೇವಸ್ಥಾನದಲ್ಲಿ ಶನಿವಾರ ಭೀಮನಗರ ಕುಲಸ್ಥರು, ಯಜಮಾನರು, ಮತ್ತು ಅಂಬೇಡ್ಕರ್ ಸಂಘದ ಪದಾಧಿಕಾರಿಗಳ ಸಮಕ್ಷಮ ಸಭೆ ಕರೆಯಲಾಗಿತ್ತು.

ಈ ವೇಳೆ ಭೀಮನಗರದ ಯಜಮಾನರು ಮುಖಂಡರ ಅಭಿಪ್ರಾಯಗಳನ್ನು ಕೇಳಿದರು. ಆಗ ಬಹುತೇಕ ಮುಖಂಡರು ತಮ್ಮ ಅಭಿಪ್ರಾಯವನ್ನು ಸಭೆಯಲ್ಲಿ ಹೇಳಿ, ಭವನ ಕಾಮಗಾರಿ ಅಪೂರ್ಣ ಗೊಂಡಿರುವುದರಿಂದ ಯಾವುದೇ ಕಾರಣಕ್ಕೂ ನವೆಂಬರ್ 29 ರಂದು ಉದ್ಘಾಟನೆ ಬೇಡ, ಸಂಪೂರ್ಣ ಕಾಮಗಾರಿ ಆದ ನಂತರವೇ ಉದ್ಘಾಟನೆ ಮಾಡುವುದು ಸೂಕ್ತ ಎಂದರು.

ಅಲ್ಲದೆ, ಹಿಂದಿನಿಂದಲೂ ಭೀಮನಗರದಲ್ಲಿ ಯಾವುದೇ ನಿರ್ಣಯ ತೆಗೆದು ಕೊಂಡರು.. ಬಸವನಗುಡಿಯಲ್ಲಿ ಸಭೆ ಸೇರಿ ಕುಲಸ್ಥರು ಒಮ್ಮತದಿಂದ ನಿರ್ಧಾರ ತೆಗೆದು ಕೊಳ್ಳುತ್ತಿದ್ದರು, ಮುಂದೆಯೂ ಇದೇ ಪರಂಪರೆ ನಡೆಯಬೇಕು. ಬೇರೆ ಸ್ಥಳಗಳಲ್ಲಿ ಕುಳಿತು ಭೀಮನಗರದ ವಿಚಾರಗಳ ಬಗ್ಗೆ ನಿರ್ಧಾರ ತೆಗೆದು ಕೊಳ್ಳಬಾರದು ಎಂದು ಸಭೆಗೆ ತಿಳಿಸಿದರು.

ಸಭೆಯಲ್ಲಿ ಓರ್ವ ಮುಖಂಡ ಮಾತನಾಡಿ, ನಮ್ಮ ಯಜಮಾನರು ಮತ್ತು ಕುಲದ ಗಮನಕ್ಕೆ ತರದೆ ಅಂಬೇಡ್ಕರ್ ಭವನ ಉದ್ಘಾಟನೆ ದಿನಾಂಕ ನಿಗದಿ ಮಾಡಲಾಗಿದೆ ಎಂದರು. ಈ ಮಾತಿಗೆ ಸಭೆಯಲ್ಲಿ ಆಕ್ಷೇಪ ವ್ಯಕ್ತವಾಯಿತು. ಭೀಮನಗರದ ದೊಡ್ಡ ಯಜಮಾನರೇ, ಪತ್ರಿಕಾ ಗೋಷ್ಠಿಯಲ್ಲಿ ಹಾಜರಿದ್ದು ಹೇಳಿಕೆ ನೀಡಿದ್ದಾರೆ ಎಂಬ ಬಗ್ಗೆಯೂ ಸಭೆಯಲ್ಲಿ ಪ್ರಸ್ತಾಪ ಆಯಿತು.

ಅಂತಿಮವಾಗಿ ಭೀಮನಗರದ ಯಜಮಾನರು ಅಂಬೇಡ್ಕರ್ ಭವನ ಉದ್ಘಾಟನೆ 29 ರಂದು ನಡೆಯಬೇಕಿದ್ದ ಕಾರ್ಯಕ್ರಮ ಮುಂದೂಡುವ ನಿರ್ಧಾರ ತೆಗೆದು ಕೊಂಡರು. ಇದರಿಂದ ಒಂದು ಹಂತದಲ್ಲಿ ನಿರಾಶೆ ಒಳಗಾದ ಅಂಬೇಡ್ಕರ್ ಸ್ಮಾರಕ ಸಂಘದ ಅಧ್ಯಕ್ಷರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡುವ ಬಗ್ಗೆ ಸಭೆಯಲ್ಲಿ ತಿಳಿಸಿದರು. ನಂತರದಲ್ಲಿ ಮುಖಂಡರು ಅವರನ್ನು ಸಮಾಧಾನ ಮಾಡಿದರು ಎಂದು ತಿಳಿದು ಬಂದಿದೆ

ವರದಿ: ನಿಂಪು ಬ್ರದರ್ಸ್

Releated Posts

ಕೊಳ್ಳೇಗಾಲ: ಪೌರಕಾರ್ಮಿಕರಿಗೆ ಊಟ ಬಡಿಸಿದ ಶಾಸಕ ಎ.ಆರ್. ಕೃಷ್ಣಮೂರ್ತಿ

ಕೊಳ್ಳೇಗಾಲ. ಸಮಾಜದಲ್ಲಿ ಕೊಳಕು ಮುಕ್ತ ಪ್ರದೇಶವಾಗಲು ಪೌರಕಾರ್ಮಿಕರು ಮುಖ್ಯ ಕಾರಣವಾಗಿದೆ ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ಅವರು ಹೇಳಿದರು. ಪಟ್ಟಣದ ಸಿಡಿಎಸ್ ಭವನದಲ್ಲಿ ಬುಧವಾರ ಪೌರ…

ByByN Rajesh Feb 11, 2026

ಕೊಳ್ಳೇಗಾಲ ನಗರಸಭೆ – ಜಿಲ್ಲಾಧಿಕಾರಿ ಶ್ರೀ ರೂಪ ಅವರಿಂದ ಉಳಿತಾಯ ಬಜೆಟ್ ಮಂಡನೆ

ಕೊಳ್ಳೇಗಾಲ ನಗರಸಭೆಯ ೨೦೨೬-೨೭ನೇ ಸಾಲಿನ ಬಜೆಟ್‌ನ ಪಕ್ಷಿ ನೋಟ ಕೊಳ್ಳೇಗಾಲ, ಫೆ, ೧೦- ಕೊಳ್ಳೇಗಾಲ ನಗರಸಭೆಯ ಸಭಾಂಗಣದಲ್ಲಿ ಶಾಸಕ ಎ.ಆರ್. ಕೃಷ್ಣಮೂರ್ತಿಯವರ ಅಧ್ಯಕ್ಷತೆಯಲ್ಲಿ ಫೆ.೧೦…

ByByN Rajesh Feb 10, 2026

ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನಿರ್ದೇಶಕರ ಅಯ್ಕೆ

ಕೊಳ್ಳೇಗಾಲ. ಸತ್ತೇಗಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಕ್ಕೆ ಭಾನುವಾರ ಚುನಾವಣೆ ನಡೆಯಿತು. ಗ್ರಾಮದಲ್ಲಿ ನಡೆದ ಚುನಾವಣೆಯಲ್ಲಿ 8…

ByByN Rajesh Feb 9, 2026

ಕೊಳ್ಳೇಗಾಲ : ಗ್ಯಾರೆಂಟಿ ಯೋಜನೆಗಳಿಂದ ನವ ಕರ್ನಾಟಕ ನಿರ್ಮಾಣ – ಶಾಸಕ ಎ.ಆರ್.ಕೃಷ್ಣಮೂರ್ತಿ

ಸರ್ಕಾರದ ಅಭಿವೃದ್ಧಿ ಯೋಜನೆ, ಕಾರ್ಯಕ್ರಮಗಳು ನವಕರ್ನಾಟಕ ನಿರ್ಮಾಣಕ್ಕೆ ಸಹಕಾರಿ: ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಕೊಳ್ಳೇಗಾಲ. ರಾಜ್ಯಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಜನರ ಅಭಿವೃದ್ಧಿಗಾಗಿ…

ByByN Rajesh Jan 17, 2026

Leave a Reply

Your email address will not be published. Required fields are marked *

Scroll to Top