/* Change button hover color to red */
button:hover,
.wp-block-button__link:hover,
input[type="submit"]:hover {
    background-color: red !important;
    color: #fff !important; /* Makes text white for contrast */
}

  • Home
  • ಜಿಲ್ಲೆ
  • ಹೊಸ ಹಂಪಾಪುರ ಗ್ರಾಮದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ
Image

ಹೊಸ ಹಂಪಾಪುರ ಗ್ರಾಮದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಕೊಳ್ಳೇಗಾಲ :
ಹೊಸ ಹಂಪಾಪುರದ ಕರವೇ ಗ್ರಾಮ ಘಟಕದಿಂದ ಕನ್ನಡ ರಾಜ್ಯೋತ್ಸವ ಆಚರಣೆ

ಕೊಳ್ಳೇಗಾಲ:ತಾಲೂಕಿನ ಹೊಸ ಹಂಪಾಪುರ ಗ್ರಾಮದಲ್ಲಿ ಇಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಕೊಳ್ಳೇಗಾಲ ತಾಲೂಕು ಹಂಪಾಪುರ ಗ್ರಾಮ ಘಟಕದ ವತಿಯಿಂದ ವತಿಯಿಂದ ಗ್ರಾಮದಲ್ಲಿರುವ ಮೋದಿ ಸರ್ಕಲ್ ನಲ್ಲಿ ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನು ಆಚರಣೆ ಮಾಡಲಾಯಿತು.

ಕಾರ್ಯಕ್ರಮದ ಧ್ವಜಾರೋಹಣ ಕಾರ್ಯಕ್ರಮವನ್ನು ಕರವೇ( ಪ್ರವೀಣ್ ಶೆಟ್ಟಿ ಬಣ )ತಾಲೂಕು ಘಟಕದ ಅಧ್ಯಕ್ಷರಾದ ಜಗದೀಶ್ ಶಾಸ್ತ್ರೀ ಯವರು ಮತ್ತು ಕರವೇ ಪದಾಧಿಕಾರಿಗಳು ನೆರೆವೇರಿಸಿದರು. ಬಳಿಕ ಕನ್ನಡಾಂಬೆ ತಾಯಿ ಭುವನೇಶ್ವರಿ ಭಾವಚಿತ್ರ ಕ್ಕೆ ಪುಷ್ಪರ್ಚನೆ ಮಾಡಿ ಪೂಜೆ ಸಲ್ಲಿಸಿ, ಕಾರ್ಯಕ್ರಮಕ್ಕೆ ಭಾಗವಹಿಸಿದ ಗ್ರಾಮದ ಮುಖಂಡರು ಮತ್ತು ಸಾರ್ವಜನಿಕರಿಗೆ ಕರವೇ ಪದಾಧಿಕಾರಿಗಳು ಸಿಹಿ ವಿತರಣೆ ಮಾಡಿ, ಅನ್ನ ಸಂತರ್ಪಣೆ ಮಾಡಿದರು.

ಬಳಿಕ ಕರವೇ ತಾಲೂಕು ಘಟಕದ ಅಧ್ಯಕ್ಷರಾದ ಜಗದೀಶ್ ಶಾಸ್ತ್ರೀ ಮಾತನಾಡಿ, ಕನ್ನಡ ಎಂಬುದು ಬರಿ ಭಾಷೆಯಲ್ಲ, ಅದು ನಮ್ಮ ರಕ್ತ. ಇಂತಹ ಗಂಧದನಾಡು, ಸಾಂಸ್ಕೃತಿಕ ಕಲೆಗಳ ಬೀಡು, ಅಚ್ಚ ಹಸುರಿನ ನಾಡು ನಮ್ಮ ಕರುನಾಡು. ಇಂತಹ ನಾಡಿನಲ್ಲಿ ಜನಿಸಿರುವು ನಮ್ಮ ಸೌಭಾಗ್ಯ. ನಮ್ಮ ನಾಡಿನ ಭಾಷೆ, ನೆಲ, ಜಲ ರಕ್ಷಣೆ ಮಾಡುವುದು ನಮ್ಮೆಲ್ಲರ ಕರ್ತವ್ಯ, ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣ ಕನ್ನಡ ನಾಡಿನ ಭಾಷೆ, ನೆಲ ರಕ್ಷಣೆ, ನೊಂದ ಜನರ ರಕ್ಷಣೆಗೆ ಬದ್ದ. ಕನ್ನಡದ ವಿಷಯದಲ್ಲಿ ಯಾವುದೇ ಸಮಸ್ಯೆ ಬಂದರೆ ನಮ್ಮ ಕರವೇ ಪಡೆ ಸದಾ ಹೋರಾಟಕ್ಕೆ ಸದಾ ಸಿದ್ದ. ಹಾಗೆಯೇ ಕನ್ನಡ ರಾಜ್ಯೋತ್ಸವವನ್ನು ಪ್ರತಿ ಗ್ರಾಮಗಳಲ್ಲಿ ಎಲ್ಲರೂ ವಿಜೃಂಭಣೆಯಿಂದ ಆಚರಿಸಬೇಕೆಂದು ಕರೆ ನೀಡಿದರು.
ಕರವೇ ಗ್ರಾಮ ಘಟಕದ ಅಧ್ಯಕ್ಷ ರೇವಣ್ಣ ನಾಯಕ ಮಾತನಾಡ, ನಾವೆಲ್ಲ ಕನ್ನಡ ನಾಡಿನ ಮಕ್ಕಳು, ಕನ್ನಡದ ರಕ್ಷಣೆಗೆ, ನೊಂದ ಜನರಿಗೆ ನ್ಯಾಯ ಕೊಡಿಸಲು ಎಂತಹ ಪರಿಸ್ಥಿತಿಯಲ್ಲೂ ಹೋರಾಟಕ್ಕೆ ಸಿದ್ದ. ಯುವಕರು, ಹಿರಿಯರು, ಪ್ರತಿಯೊಬ್ಬರೂ ಕನ್ನಡ ರಾಜ್ಯೋತ್ಸವ ವನ್ನು ವಿಜೃಂಭಣೆಯಿಂದ ಆಚರಿಸಿ ನಮ್ಮ ಕನ್ನಡ ನಾಡಿಗೆ ಗೌರವ ಸಲ್ಲಿಸಬೇಕು ಎಂದರು.

ಕಾರ್ಯಕ್ರಮದಲ್ಲಿ, ಕರವೇ ತಾಲೂಕು ಅಧ್ಯಕ್ಷ ಜಗದೀಶ್ ಶಾಸ್ತ್ರೀ, ರೈತ ಮುಖಂಡ ಅಣಗಳ್ಳಿ ಬಸವರಾಜು, ಗ್ರಾ. ಪಂ ಅಧ್ಯಕ್ಷ ನಾಗರಾಜು,ಕರವೇ ಹಂಪಾಪುರ ಗ್ರಾಮ ಘಟಕದ ಅಧ್ಯಕ್ಷ ರೇವಣ್ಣ ನಾಯಕ, ಯಜಮಾನರಾದ ಪುಟ್ಟಸ್ವಾಮಿನಾಯಕ, ನಾಗರಾಜು, ಶಿವಣ್ಣ, ಗೋಪಾಲನಾಯಕ,ಮಹೇಶ್, ಮೂರ್ತಿ, ರಂಗಸ್ವಾಮಿ ನಾಯಕ, ಗುರುಮಾಲ್ಲ ನಾಯಕ, ಹಾಗೂ ಯುವಕರು ಗ್ರಾಮಸ್ಥರು ಉಪಸ್ಥಿತರಿದ್ದರು

ವೆರದಿ : ನಿಂಪು ಬ್ರದರ್ಸ್

Releated Posts

ಕೊಳ್ಳೇಗಾಲ: ಪೌರಕಾರ್ಮಿಕರಿಗೆ ಊಟ ಬಡಿಸಿದ ಶಾಸಕ ಎ.ಆರ್. ಕೃಷ್ಣಮೂರ್ತಿ

ಕೊಳ್ಳೇಗಾಲ. ಸಮಾಜದಲ್ಲಿ ಕೊಳಕು ಮುಕ್ತ ಪ್ರದೇಶವಾಗಲು ಪೌರಕಾರ್ಮಿಕರು ಮುಖ್ಯ ಕಾರಣವಾಗಿದೆ ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ಅವರು ಹೇಳಿದರು. ಪಟ್ಟಣದ ಸಿಡಿಎಸ್ ಭವನದಲ್ಲಿ ಬುಧವಾರ ಪೌರ…

ByByN Rajesh Feb 11, 2026

ಕೊಳ್ಳೇಗಾಲ ನಗರಸಭೆ – ಜಿಲ್ಲಾಧಿಕಾರಿ ಶ್ರೀ ರೂಪ ಅವರಿಂದ ಉಳಿತಾಯ ಬಜೆಟ್ ಮಂಡನೆ

ಕೊಳ್ಳೇಗಾಲ ನಗರಸಭೆಯ ೨೦೨೬-೨೭ನೇ ಸಾಲಿನ ಬಜೆಟ್‌ನ ಪಕ್ಷಿ ನೋಟ ಕೊಳ್ಳೇಗಾಲ, ಫೆ, ೧೦- ಕೊಳ್ಳೇಗಾಲ ನಗರಸಭೆಯ ಸಭಾಂಗಣದಲ್ಲಿ ಶಾಸಕ ಎ.ಆರ್. ಕೃಷ್ಣಮೂರ್ತಿಯವರ ಅಧ್ಯಕ್ಷತೆಯಲ್ಲಿ ಫೆ.೧೦…

ByByN Rajesh Feb 10, 2026

ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನಿರ್ದೇಶಕರ ಅಯ್ಕೆ

ಕೊಳ್ಳೇಗಾಲ. ಸತ್ತೇಗಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಕ್ಕೆ ಭಾನುವಾರ ಚುನಾವಣೆ ನಡೆಯಿತು. ಗ್ರಾಮದಲ್ಲಿ ನಡೆದ ಚುನಾವಣೆಯಲ್ಲಿ 8…

ByByN Rajesh Feb 9, 2026

ಕೊಳ್ಳೇಗಾಲ : ಗ್ಯಾರೆಂಟಿ ಯೋಜನೆಗಳಿಂದ ನವ ಕರ್ನಾಟಕ ನಿರ್ಮಾಣ – ಶಾಸಕ ಎ.ಆರ್.ಕೃಷ್ಣಮೂರ್ತಿ

ಸರ್ಕಾರದ ಅಭಿವೃದ್ಧಿ ಯೋಜನೆ, ಕಾರ್ಯಕ್ರಮಗಳು ನವಕರ್ನಾಟಕ ನಿರ್ಮಾಣಕ್ಕೆ ಸಹಕಾರಿ: ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಕೊಳ್ಳೇಗಾಲ. ರಾಜ್ಯಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಜನರ ಅಭಿವೃದ್ಧಿಗಾಗಿ…

ByByN Rajesh Jan 17, 2026

Leave a Reply

Your email address will not be published. Required fields are marked *

Scroll to Top