/* Change button hover color to red */
button:hover,
.wp-block-button__link:hover,
input[type="submit"]:hover {
    background-color: red !important;
    color: #fff !important; /* Makes text white for contrast */
}

  • Home
  • ಜಿಲ್ಲೆ
  • ತತಮಿಳುನಾಡು ಕಡೆಗೆ ಭತ್ತದ ಹುಲ್ಲು ಅಕ್ರಮವಾಗಿ ಸಾಗಣೆ – ಚಾಮರಾಜನಗರ ಜಿಲ್ಲಾ ಆಡಳಿತ ಮೌನವೇಕೆ ?
Image

ತತಮಿಳುನಾಡು ಕಡೆಗೆ ಭತ್ತದ ಹುಲ್ಲು ಅಕ್ರಮವಾಗಿ ಸಾಗಣೆ – ಚಾಮರಾಜನಗರ ಜಿಲ್ಲಾ ಆಡಳಿತ ಮೌನವೇಕೆ ?

ಕೊಳ್ಳೇಗಾಲ: ಕೊಳ್ಳೇಗಾಲ ತಾಲ್ಲೂಕು ಮತ್ತು ನರಸೀಪುರ ತಾಲೂಕಿನ ಸುತ್ತಮುತ್ತಲಿನ ಜಮೀನುಗಳಿಂದ ಜಾನುವಾರುಗಳ ಮೇವುಗಳನ್ನು ಅಕ್ರಮವಾಗಿ ಸಾಗಾಣೆ ಮಾಡುತ್ತಿರುವ ಬಗ್ಗೆ ಕೊಳ್ಳೇಗಾಲ ತಾಲ್ಲೂಕಿನ ಗ್ರಾಮೀಣ ಭಾಗದ ರೈತರಿಂದ ವ್ಯಾಪಕ ದೂರುಗಳು ಕೇಳಿ ಬರುತ್ತಿದೆ.

ಈಗಾಗಲೇ ಪ್ರಸಕ್ತ ಸಾಲಿನಲ್ಲಿ ಭತ್ತದ ಬೆಳೆ ಕಟಾವಿಗೆ ಬಂದಿದ್ದು, ನರಸೀಪುರ ತಾಲೂಕಿನ ಮೂಗೂರು, ಮಾಡ್ರಳ್ಳಿ, ತಲಕಾಡು ಸುತ್ತಮುತ್ತಲಿನ ಜಮೀನುಗಳಲ್ಲಿ ಭತ್ತ ಕಟಾವು ಮಾಡಲಾಗುತ್ತಿದೆ.

ಭತ್ತ ಕಟಾವು ಆದ ನಂತರ ಜಾನುವಾರುಗಳ ಭತ್ತದ ಹುಲ್ಲನ್ನು ತಮಿಳು ನಾಡು ಭಾಗದ ದಲ್ಲಾಳಿಗಳು ಬಂದು ಹುಲ್ಲನ್ನು ರೈತರಿಂದ ಖರೀದಿಸಿ ಅಕ್ರಮವಾಗಿ ತಮಿಳುನಾಡಿನ ಕಡೆಗೆ ಸಾಗಿಸಲಾಗುತ್ತಿದೆ.

ದಲ್ಲಾಳಿಗಳ ಮದ್ಯವಸ್ತಿಕೆಯಿಂದ ಬಹುತೇಕ ಭತ್ತ ಬೆಳೆದ ರೈತರು ತಮ್ಮ ಹುಲ್ಲುಗಳನ್ನು ತಮಿಳುನಾಡು ಭಾಗದವರಿಗೆ ಮಾರಾಟ ಮಾಡುತ್ತಿದ್ದಾರೆ. ಇದರಿಂದ ಸ್ಥಳಿಯ ಇತರೆ ರೈತರಿಗೆ ಹಸುಗಳಿಗೆ ಮೇವು ಖರೀದಿಸಲು ಸಾಧ್ಯವಾಗುತ್ತಿಲ್ಲ.

ಇತ್ತೀಚೆಗೆ ಕಳೆದೊಂದು ವಾರದಿಂದ ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಮತ್ತು ಸಮೀಪದ ಗ್ರಾಮಗಳಿಂದಲೂ ಭತ್ತದ ಹುಲ್ಲನ್ನು ತಮಿಳುನಾಡಿನ ಕಡೆಯ ದಲ್ಲಾಳಿಗಳು ಖರೀದಿ ಮಾಡುತ್ತಿರುವುದು ಕಂಡುಬರುತ್ತಿದೆ.

ಇದರಿಂದಾಗಿ ಹಸುಗಳನ್ನು ಸಾಕುತ್ತಿರುವ ಇತರ ರೈತರಿಗೆ ಭತ್ತದ ಹುಲ್ಲುಗಳು ಸಿಗುತ್ತಿಲ್ಲ.ಸಮೀಪದ ಕರ್ನಾಟಕದ ಗಡಿಭಾಗದಿಂದಲೇ ಹುಲ್ಲು ತುಂಬಿದ ಲಾರಿಗಳು ಚೆಕ್ ಪೋಸ್ಟ್ ಮೂಲಕವೇ ಹೋಗುತ್ತಿದ್ದರೂ ಸಹ, ಪೋಲಿಸ್ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ಮೌನವಹಿಸಿರುವುದು ಹಲವು ಪ್ರಶ್ನೆಗಳನ್ನು ಹುಟ್ಡುಹಾಕಿದೆ.

ಕೊಳ್ಳೇಗಾಲ ತಾಲ್ಲೂಕು ಆಡಳಿತ, ಹನೂರು ತಾಲ್ಲೂಕು ಆಡಳಿತ ಮತ್ತು ಚಾಮರಾಜನಗರ ಜಿಲ್ಲಾ ಆಡಳಿತ ತಕ್ಷಣ ಎಚ್ಚೆತ್ತು ಕೊಂಡು ತಮಿಳುನಾಡಿನ ಕಡೆಗೆ ಅಕ್ರಮವಾಗಿ ಸಾಗಾಣೆ ಆಗುತ್ತಿರುವ ಹಸುವಿನ ಮೇವನ್ನು ತಡೆಹಿಡಿಯ ಬೇಕೆಂದು ಹಲವಾರು ರೈತರು ಒತ್ತಾಯಿಸಿದ್ದಾರೆ.

  • ನಿಂಪುವಾರ್ತೆ

Releated Posts

ಕೊಳ್ಳೇಗಾಲ: ಪೌರಕಾರ್ಮಿಕರಿಗೆ ಊಟ ಬಡಿಸಿದ ಶಾಸಕ ಎ.ಆರ್. ಕೃಷ್ಣಮೂರ್ತಿ

ಕೊಳ್ಳೇಗಾಲ. ಸಮಾಜದಲ್ಲಿ ಕೊಳಕು ಮುಕ್ತ ಪ್ರದೇಶವಾಗಲು ಪೌರಕಾರ್ಮಿಕರು ಮುಖ್ಯ ಕಾರಣವಾಗಿದೆ ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ಅವರು ಹೇಳಿದರು. ಪಟ್ಟಣದ ಸಿಡಿಎಸ್ ಭವನದಲ್ಲಿ ಬುಧವಾರ ಪೌರ…

ByByN Rajesh Feb 11, 2026

ಕೊಳ್ಳೇಗಾಲ ನಗರಸಭೆ – ಜಿಲ್ಲಾಧಿಕಾರಿ ಶ್ರೀ ರೂಪ ಅವರಿಂದ ಉಳಿತಾಯ ಬಜೆಟ್ ಮಂಡನೆ

ಕೊಳ್ಳೇಗಾಲ ನಗರಸಭೆಯ ೨೦೨೬-೨೭ನೇ ಸಾಲಿನ ಬಜೆಟ್‌ನ ಪಕ್ಷಿ ನೋಟ ಕೊಳ್ಳೇಗಾಲ, ಫೆ, ೧೦- ಕೊಳ್ಳೇಗಾಲ ನಗರಸಭೆಯ ಸಭಾಂಗಣದಲ್ಲಿ ಶಾಸಕ ಎ.ಆರ್. ಕೃಷ್ಣಮೂರ್ತಿಯವರ ಅಧ್ಯಕ್ಷತೆಯಲ್ಲಿ ಫೆ.೧೦…

ByByN Rajesh Feb 10, 2026

ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನಿರ್ದೇಶಕರ ಅಯ್ಕೆ

ಕೊಳ್ಳೇಗಾಲ. ಸತ್ತೇಗಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಕ್ಕೆ ಭಾನುವಾರ ಚುನಾವಣೆ ನಡೆಯಿತು. ಗ್ರಾಮದಲ್ಲಿ ನಡೆದ ಚುನಾವಣೆಯಲ್ಲಿ 8…

ByByN Rajesh Feb 9, 2026

ಕೊಳ್ಳೇಗಾಲ : ಗ್ಯಾರೆಂಟಿ ಯೋಜನೆಗಳಿಂದ ನವ ಕರ್ನಾಟಕ ನಿರ್ಮಾಣ – ಶಾಸಕ ಎ.ಆರ್.ಕೃಷ್ಣಮೂರ್ತಿ

ಸರ್ಕಾರದ ಅಭಿವೃದ್ಧಿ ಯೋಜನೆ, ಕಾರ್ಯಕ್ರಮಗಳು ನವಕರ್ನಾಟಕ ನಿರ್ಮಾಣಕ್ಕೆ ಸಹಕಾರಿ: ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಕೊಳ್ಳೇಗಾಲ. ರಾಜ್ಯಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಜನರ ಅಭಿವೃದ್ಧಿಗಾಗಿ…

ByByN Rajesh Jan 17, 2026

Leave a Reply

Your email address will not be published. Required fields are marked *

Scroll to Top