ಕ್ಷೇತ್ರದ ಜನತೆಯ ಋಣ ತೀರಿಸಲು ನೀಡಿರುವ ಒಂದು ಅವಕಾಶವನ್ನು ಬಳಸಿಕೊಂಡು ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಶಾಸಕ ಎಂಆರ್ ಮಂಜುನಾಥ್ ಅಭಿಮತ ವ್ಯಕ್ತಪಡಿಸಿದರು…
ಹನೂರು ತಾಲೂಕಿನ ಮಾಸ್ತಿ ಗೌಡನ ದೊಡ್ಡಿ ಗ್ರಾಮದಲ್ಲಿ ಜನಪರ ಸಾಹಿತ್ಯ ಪರಿಷತ್ತು (ರಿ) ಬೆಂಗಳೂರು ಕನಕ ಜಯಂತಿ ಕನಕ ಮತ್ತು ರಾಯಣ್ಣ ಗ್ರಾಮಾಭಿವೃದ್ಧಿ ಸಂಘ (ರಿ) ಹಾಗೂ ಬೀರೇಶ್ವರ ಸ್ವಾಮಿ ದೇವಸ್ಥಾನ ದತ್ತಿ ಮತ್ತು ಅಭಿವೃದ್ಧಿ ಟ್ರಸ್ಟ್ (ರಿ ) ಕಾರ್ಯಕ್ರಮದ ಉದ್ಘಾಟನಾ ಸಮಾರಂಭದ ದೀಪ ಬೆಳಗಿಸಿ ನಂತರ ಅವರು ಮಾತನಾಡಿದರು…
ಹನೂರು ಕ್ಷೇತ್ರದ ಉದ್ದಗಲಕ್ಕೂ ಜಲತ್ವ ಸಮಸ್ಯೆಗಳ ಅರಿತು ಅಭಿವೃದ್ಧಿಪಡಿಸಲು ಕ್ಷೇತ್ರದ ಜನತೆ ನನ್ನ ಮೇಲೆ ವಿಶ್ವಾಸವಿಟ್ಟು ಆಯ್ಕೆ ಮಾಡಿದ್ದಾರೆ ಜನತೆಯ ಋಣ ತೀರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು..
ಜನಪರ ಸಾಹಿತ್ಯ ರಾಜ್ಯದ್ಯಕ್ಷ ಮಹೇಶ್ ಮಾಸ್ತಿ ಗೌಡನ ದೊಡ್ಡಿ ಗ್ರಾಮದಲ್ಲಿ ಉತ್ತಮ ಕಾರ್ಯಕ್ರಮಕ್ಕೆ ಮುಂದಾಗಿದ್ದಾರೆ ಅವರು ರಾಜ್ಯಾದ್ಯಂತ ಒಳ್ಳೆಯ ಕೆಲಸ ಮಾಡುವ ನಿಟ್ಟಿನಲ್ಲಿ ಸ್ವಗ್ರಾಮದಲ್ಲೂ ಸಹ ಗ್ರಾಮದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲು ಒಳ್ಳೆಯ ಕಾರ್ಯಕ್ರಮ ಕೈಗೆತ್ತಿಕೊಂಡಿದ್ದಾರೆ ಗ್ರಾಮದ ಜನತೆ ಹಾಗೂ ಸುತ್ತಮುತ್ತಲಿನ ಗ್ರಾಮದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲು ಸಹಕಾರ ನೀಡಬೇಕು ಎಂದರು.
ದೇವಾಲಯ ನಿರ್ಮಾಣಕ್ಕೆ 5 ಲಕ್ಷ : ಈಗಾಗಲೇ ಶಾಸಕರ ಅನುದಾನದಲ್ಲಿ ಬೀರೇಶ್ವರ ಸ್ವಾಮಿ ದೇವಾಲಯ ಅಭಿವೃದ್ಧಿಗೆ ಹಣ ನೀಡಲಾಗಿದೆ ಮುಂದಿನ ದಿನಗಳಲ್ಲಿ ಗ್ರಾಮದಲ್ಲಿ ಸಮುದಾಯ ಭವನ ಹಾಗೂ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಬದ್ಧರಾಗಿರುವುದಾಗಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿ ಮಹೇಶ್ ಚಿಕ್ಕಲ್ಲೂರು ಮಾಸ್ತಿ ಗೌಡನ ದೊಡ್ಡಿ 400 ವರ್ಷಗಳ ಇತಿಹಾಸ ಇರುವ ಕುಗ್ರಾಮವಾಗಿರುವುದು ಜನತೆಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಗ್ರಾಮದಲ್ಲಿ ಸಂಘ ಅಸ್ತಿತ್ವಕ್ಕೆ ಬಂದಿದೆ ಇಲ್ಲಿನ ಯುವಕರು ಮತ್ತು ಗ್ರಾಮದ ಗುರುಹಿರಿಯರು ಸಹಕಾರದೊಂದಿಗೆ ಅಭಿವೃದ್ಧಿಪಡಿಸಲು ಶಾಸಕರು ಹೆಚ್ಚಿನ ರೀತಿಯಲ್ಲಿ ಕುಗ್ರಮ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳನ್ನು ಅಭಿವೃದ್ಧಿಪಡಿಸಲು ಮುಂದಾಗಬೇಕು ಎಂದು ತಿಳಿಸಿದರು
ಕುರುಬರ ಸಂಘದ ರಾಜ್ಯ ಮಹಿಳಾ ಅಧ್ಯಕ್ಷ ಪ್ರಭಾವತಿ ಕೆ ಆರ್ ಮಾತನಾಡಿ : ಕುರುಬ ಹಾಲುಮತ ಸಮಾಜ ತಮ್ಮ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ನೀಡುವ ಮೂಲಕ ಮುಖ್ಯ ವಾಹಿನಿಗೆ ಬರಬೇಕು ಸರ್ಕಾರದಿಂದ ಸಿಗುವ ಸೌಲತ್ತುಗಳನ್ನು ಪಡೆದು ಉನ್ನತ ಹುದ್ದೆಗಳನ್ನು ಅಲಂಕರಿಸಿ ಗ್ರಾಮಗಳ ಅಭಿವೃದ್ಧಿಗೆ ಹೆಚ್ಚಿನ ರೀತಿಯಲ್ಲಿ ಅನುಕೂಲದಾಯಕವಾಗುವ ನಿಟ್ಟಿನಲ್ಲಿ ಮುಂದಾಗಬೇಕು' ಮುಖ್ಯಮಂತ್ರಿ ಸಿದ್ದರಾಮಯ್ಯ ದೇವರಾಜ್ ಅರಸು ಅವರ ಆಡಳಿತಕ್ಕಿಂತ ಹೆಚ್ಚಿನ ದಿನಗಳು ಆಡಳಿತ ನಡೆಸಿದ ದಾಖಲೆ ಬರದಿದ್ದಾರೆ ಸಮಾಜದ ಹಾಗೂ ಎಲ್ಲಾ ಸಮುದಾಯದ ನಾಯಕರಾಗಿ ಮುಖ್ಯಮಂತ್ರಿಗಳಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಹೀಗಾಗಿ ಸಮಾಜ ಏಳಿಗೆಗಾಗಿ ಸಹ ಉತ್ತಮ ಕೆಲಸಗಳನ್ನು ಹಲವಾರು ಜನಪರ ಕಾರ್ಯಕ್ರಮಗಳನ್ನು ನೀಡಿದ್ದಾರೆ ಎಂದರು..
ಕಾರ್ಯಕ್ರಮದಲ್ಲಿ : ಕೊಳ್ಳೇಗಾಲ ತಾಲೂಕು ಕುರುಬರ ಸಂಘದ ಅಧ್ಯಕ್ಷ ನಂಜೇಗೌಡ ಅಧ್ಯಕ್ಷತೆ ವಹಿಸಿದ್ದರು ಹಾಗೂ ಕಾರ್ಯಕ್ರಮದಲ್ಲಿ ಕರ್ನಾಟಕ ಪ್ರದೇಶ ಕುರುಬರ ಸಂಘ ಬೆಂಗಳೂರು ಮಾಜಿ ಅಧ್ಯಕ್ಷರಾದ ಸುಬ್ರಮಣ್ಯ ಕೊಳ್ಳೇಗಾಲ ತಾಲೂಕು ಕುರುಬರ ಸಂಘದ ಖಜಾಂಜಿ ವೆಂಕ್ಟೇ ಗೌಡ ಕನಕ ನೌಕರರ ಕ್ಷೇಮಾಭಿವೃದ್ಧಿ ಸಂಘ ಕೊಳ್ಳೇಗಾಲ ಅಧ್ಯಕ್ಷರು ಬ್ರಹ್ಮ ಲಿಂಗಯ್ಯ ಹನೂರು ತಾಲೂಕು ಕುರುಬರ ಸಂಘದ ಅಧ್ಯಕ್ಷ ಶಿವಪ್ಪ ಹನೂರು ತಾಲೂಕು ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಜಿ ದೇವರಾಜ ನಾಯ್ಡು ಮಾಸ್ತಿ ಗೌಡನ ದೊಡ್ಡಿ ಹಿರಿಯ ಮುಖಂಡ ಮಹದೇವ್ ಗೌಡ ಮತ್ತು ಸುಂದರ್ ಮಲ್ಲೇಗೌಡ ಕೈಲಾಸ್ ಮೂರ್ತಿ ಶಿವಮೂರ್ತಿ ಕೆಂಪರಾಜು ವಿ ಸಿ ಬಸವಣ್ಣ ಕೃಷ್ಣ ಹಾಗೂ ಇನ್ನಿತರ ಮುಖಂಡರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು…..
- ನಿಂಪುವಾರ್ತೆ
For more information about this story, visit our website regularly. We will keep you updated as more details emerge about this development. Follow Ra. Power 28 for all the latest news from Karnataka, covering politics, sports, crime, health, and more.