/* Change button hover color to red */
button:hover,
.wp-block-button__link:hover,
input[type="submit"]:hover {
    background-color: red !important;
    color: #fff !important; /* Makes text white for contrast */
}

  • Home
  • ಜಿಲ್ಲೆ
  • ಚಾಮರಾಜನಗರ : ಕಿಡಿಗೇಡಿ ಆರೋಪಿಗಳ ಬಂಧನಕ್ಕೆ ಒತ್ತಾಯ
Image

ಚಾಮರಾಜನಗರ : ಕಿಡಿಗೇಡಿ ಆರೋಪಿಗಳ ಬಂಧನಕ್ಕೆ ಒತ್ತಾಯ

ಚಾಮರಾಜನಗರ
ಬುದ್ಧನ ಪ್ರತಿಮೆ ಹಾಗೂ ಅಂಬೇಡ್ಕರ್‌ ಪ್ಲೆಕ್ಸ್ ವಿರೂಪಗೊಳಿಸಿರುವ ಘಟನೆಯ ತಪ್ಪಿತಸ್ಥರನ್ನು ಬಂಧಿಸಿ ಗಡಿಪಾರು ಮಾಡಬೇಕು ಎಂದು ತಾಲೂಕಿನ ಜ್ಯೋತಿಗೌಡನಪುರ ಗ್ರಾಮದ ವೀರಣ್ಣ ಮತ್ತು ರಾಘವೇಂದ್ರ ಪ್ರಸನ್ನ ಒತ್ತಾಯಿಸಿದರು.
ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ತಿಂಗಳು 24ರಂದು ಜ್ಯೋತಿಗೌಡನ ಪುರ ಗ್ರಾಮದಲ್ಲಿ ಬುದ್ಧನ ಪ್ರತಿಮೆ ಮತ್ತು ಅಂಬೇಡ್ಕರ್‌ ಪ್ಲೆಕ್ಸ್ ವಿರೂಪಗೊಳಿಸಿರುವ ಘಟನೆಯನ್ನು ಗ್ರಾಮಸ್ಥರು ಜಿಲ್ಲಾಡಳಿತ ಮತ್ತು ಪೊಲೀಸ್‌ ಇಲಾಖೆ ಗಮನಕ್ಕೆ ತಂದು ಈ ಕೃತ್ಯ ಎಸಗಿರುವವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದ್ದೆವು ಎಂದು ತಿಳಿಸಿದರು.
ಘಟನೆ ನಡೆದು ಕೆಲದಿನಗಳು ಕಳೆದ ನಂತರ ಒಬ್ಬ ವ್ಯಕ್ತಿಯನ್ನು ಬಂಧಿಸಿರುವುದಾಗಿ ಪೊಲೀಸ್‌ ಇಲಾಖೆ ಮಾಹಿತಿ ನೀಡಿದೆ. ಆದರೆ ಈ ಘಟನೆ ಒಬ್ಬ ವ್ಯಕ್ತಿಯಿಂದ ಈ ಕೃತ್ಯಸಾಧ್ಯವಲ್ಲ, ಇದರ ಹಿಂದೆ ಕಾಣದ ಕೈಗಳ ಕೆಲಸವಿದೆ ಎಂದು ಪೊಲೀಸ್‌ ಇಲಾಖೆಗೆ ಅಭಿಪ್ರಾಯ ತಿಳಿಸಿದ್ದೇವು ಆದರೆ ಬಂಧಿತ ವ್ಯಕ್ತಿಯನ್ನು ಅಪರಾಧಿ ಅಲ್ಲ ಎಂದು ಗ್ರಾಮದವರು ಹೇಳಿಲ್ಲ ಆದರೆ ಗ್ರಾಮದವರೆ ಆ ವ್ಯಕ್ತಿ ಅಲ್ಲ ಎಂದು ಹೇಳಿದ್ದಾರೆ ಎಂದು ಸುಳ್ಳು ವದಂತಿ ಹಬ್ಬಿಸಿದ್ದಾರೆ ಎಂದರು.
ಬಂಧಿತ ವಕ್ತಿ ನಾಯಕ ಸಮಾಜದ ವ್ಯಕ್ತಿಯಾಗಿದ್ದಾನೆ ಎಂಬ ಕಾರಣಕ್ಕೆ ನಾಯಕ ಸಮಾಜ ಅಂಬೇಡ್ಕರ್ ವಿರೋಧಿಗಳು ಎಂದು ಯಾರು ಹೇಳಿಲ್ಲ, ಆದರೂ ಕೂಡ ನಾಯಕ ಸಮಾಜದವರು ನ.15ರಂದು ನಾಯಕ ಸಮಾಜದ ವತಿಯಿಂದ ಪ್ರತಿಭಟನೆ ನಡೆಸಿ ನಾಯಕ ಸಮಾಜ ಆಂಬೇಡ್ಕರ್‌ ವಿರೋಧಿಯಲ್ಲ ವಿರೂಪಗೊಳಿಸಿದ ನಿಜವಾದ ಆರೋಪಿಯನ್ನು ಬಂಧಿಸಿ ಎಂದು ಮನವಿ ಸಲ್ಲಿಸಿದ್ದು ನಂತರ ಸಭೆಯಲ್ಲಿ ನಮ್ಮ ಸಮಾಜದ ಬಗ್ಗೆ ನೀಡಿರುವ ಹೇಳಿಕೆಯನ್ನು ಖಂಡಿಸುತ್ತೇವೆ ಎಂದರು.
ಅಂಬೇಡ್ಕರ್‌ ಅವರು ಮಿಷನ್‌ಗನ್ ಕೊಟ್ಟಿಲ್ಲ, ನಮಗೆ ಪೆನ್ನು ಕೊಟ್ಟಿದ್ದಾರೆ ಮಿಷನ್‌ಗನ್‌ ನಮಗೆ ಬೇಕಿಲ್ಲ ಪೆನ್ನು ಸಾಕು ನ್ಯಾಯ ಪಡೆದುಕೊಳ್ಳಲು ನಮ್ಮ ಸಮಾಜದ ಬಗ್ಗೆ ಮಾತನಾಡಿದ್ದಕ್ಕೆ ನಮ್ಮ ಸಮಾಜದ ಮುಖಂಡರು ಪತ್ರಿಕಾಗೋಷ್ಠಿ ನಡೆಸಿ ಸೋಮನಾಯಕ ಅವರ ಹೇಳಿಕೆ ಖಂಡಿಸಿದ್ದಾರೆ ನಾಯಕ ಸಮಾಜವನ್ನು ಎಲ್ಲೂ ದೂಷಿಸಿಲ್ಲ ಆದರೆ ಶಿವು ವಿರಾಟ್‌ ಅವರು ಶಿವಕುಮಾರ್‌ ಅವರ ಮೇಲೆ ವಾಗ್ದಾಳಿ ಮಾಡಿರುವುದು ಸರಿಯಲ್ಲ, ನಾಯಕ ಸಮಾಜದವರು ನಾವು ಗ್ರಾಮದಲ್ಲಿ ಅಣ್ಣ ತಮ್ಮಂದಿರಂತೆ ಇದ್ದೇವೆ ತಪ್ಪಿತಸ್ಥರು ಯಾರೇ ಆಗಿರಲಿ ಪೊಲೀಸ್ ಇಲಾಖೆ ಬಂಧಿಸಲಿ ಅವರಿಗೆ ಕಠಿಣ ಶಿಕ್ಷೆ ಕೊಡಿಸಬೇಕು ಎಂದು ಮನವಿ ಮಾಡುತ್ತೇವೆ ಎಂದರು.

ವರರದಿ : ನಿಂಪು ಬ್ರದರ್ಸ್

Releated Posts

ಕೊಳ್ಳೇಗಾಲ: ಪೌರಕಾರ್ಮಿಕರಿಗೆ ಊಟ ಬಡಿಸಿದ ಶಾಸಕ ಎ.ಆರ್. ಕೃಷ್ಣಮೂರ್ತಿ

ಕೊಳ್ಳೇಗಾಲ. ಸಮಾಜದಲ್ಲಿ ಕೊಳಕು ಮುಕ್ತ ಪ್ರದೇಶವಾಗಲು ಪೌರಕಾರ್ಮಿಕರು ಮುಖ್ಯ ಕಾರಣವಾಗಿದೆ ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ಅವರು ಹೇಳಿದರು. ಪಟ್ಟಣದ ಸಿಡಿಎಸ್ ಭವನದಲ್ಲಿ ಬುಧವಾರ ಪೌರ…

ByByN Rajesh Feb 11, 2026

ಕೊಳ್ಳೇಗಾಲ ನಗರಸಭೆ – ಜಿಲ್ಲಾಧಿಕಾರಿ ಶ್ರೀ ರೂಪ ಅವರಿಂದ ಉಳಿತಾಯ ಬಜೆಟ್ ಮಂಡನೆ

ಕೊಳ್ಳೇಗಾಲ ನಗರಸಭೆಯ ೨೦೨೬-೨೭ನೇ ಸಾಲಿನ ಬಜೆಟ್‌ನ ಪಕ್ಷಿ ನೋಟ ಕೊಳ್ಳೇಗಾಲ, ಫೆ, ೧೦- ಕೊಳ್ಳೇಗಾಲ ನಗರಸಭೆಯ ಸಭಾಂಗಣದಲ್ಲಿ ಶಾಸಕ ಎ.ಆರ್. ಕೃಷ್ಣಮೂರ್ತಿಯವರ ಅಧ್ಯಕ್ಷತೆಯಲ್ಲಿ ಫೆ.೧೦…

ByByN Rajesh Feb 10, 2026

ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನಿರ್ದೇಶಕರ ಅಯ್ಕೆ

ಕೊಳ್ಳೇಗಾಲ. ಸತ್ತೇಗಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಕ್ಕೆ ಭಾನುವಾರ ಚುನಾವಣೆ ನಡೆಯಿತು. ಗ್ರಾಮದಲ್ಲಿ ನಡೆದ ಚುನಾವಣೆಯಲ್ಲಿ 8…

ByByN Rajesh Feb 9, 2026

ಕೊಳ್ಳೇಗಾಲ : ಗ್ಯಾರೆಂಟಿ ಯೋಜನೆಗಳಿಂದ ನವ ಕರ್ನಾಟಕ ನಿರ್ಮಾಣ – ಶಾಸಕ ಎ.ಆರ್.ಕೃಷ್ಣಮೂರ್ತಿ

ಸರ್ಕಾರದ ಅಭಿವೃದ್ಧಿ ಯೋಜನೆ, ಕಾರ್ಯಕ್ರಮಗಳು ನವಕರ್ನಾಟಕ ನಿರ್ಮಾಣಕ್ಕೆ ಸಹಕಾರಿ: ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಕೊಳ್ಳೇಗಾಲ. ರಾಜ್ಯಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಜನರ ಅಭಿವೃದ್ಧಿಗಾಗಿ…

ByByN Rajesh Jan 17, 2026

Leave a Reply

Your email address will not be published. Required fields are marked *

Scroll to Top