/* Change button hover color to red */
button:hover,
.wp-block-button__link:hover,
input[type="submit"]:hover {
    background-color: red !important;
    color: #fff !important; /* Makes text white for contrast */
}

  • Home
  • ಜಿಲ್ಲೆ
  • ಕೊಳ್ಳೇಗಾಲದಲ್ಲಿ ದಲಿತ ಹೋರಾಟ ರೈತ ಸಂಘ ಅಸ್ತಿತ್ವಕ್ಕೆ
Image

ಕೊಳ್ಳೇಗಾಲದಲ್ಲಿ ದಲಿತ ಹೋರಾಟ ರೈತ ಸಂಘ ಅಸ್ತಿತ್ವಕ್ಕೆ

ಕೊಳ್ಳೇಗಾಲ. ಪಟ್ಟಣದ ಎಪಿಎಂಸಿ ಆವರಣದಲ್ಲಿ ಮಂಗಳವಾರ ನೂತನವಾಗಿ ತಾಲ್ಲೂಕು ದಲಿತ ಹೋರಾಟ ರೈತ ಸಂಘವನ್ನು ಸ್ಥಾಪನೆ ಮಾಡಿ, ಪದಾಧಿಕಾರಿಗಳನ್ನು ಆಯ್ಕೆ ಮಾಡಿದರು.

ತಾಲ್ಲೂಕು ದಲಿತ ಹೋರಾಟ ರೈತ ಸಂಘದ ಅಧ್ಯಕ್ಷರಾಗಿ ಮಲ್ಲರಾಜು, ಕಾರ್ಯದರ್ಶಿಯಾಗಿ ಮುರುಳೀಧರನ್, ಗೌರವಧ್ಯಕ್ಷ ಮುದ್ದುರಾಜು, ಉಪಾಧ್ಯಕ್ಷರು ಅಣ್ಣಗಳ್ಳಿ ಆನಂದ್,ಮುತ್ತುರಾಜ್, ಖಜಾಂಚಿ ಮಹದೇವ, ಸಹ ಕಾರ್ಯದರ್ಶಿ ಶಿವಣ್ಣ, ಸಂಘಟನಾ ಕಾರ್ಯದರ್ಶಿ ಮೋಹನ್ ಪದಾಧಿಕಾರಿಗಳು ನೇಮಕ ಮಾಡಿದರು.


ಹಿರಿಯ ರೈತ ಮುಖಂಡರು ಅಣಗಳ್ಳಿ ಬಸವರಾಜು ಮಾತನಾಡಿ, ನಮ್ಮ ತಾಲ್ಲೂಕಿನಲ್ಲಿ ದಲಿತ ರೈತ ಸಂಘಟನೆ ಮಾಡಲಾಗಿದೆ. ಈಗಾಗಲೇ ಸಂಘದಲ್ಲಿ ನೂರಕ್ಕೂ ಹೆಚ್ಚು ಮಂದಿ ರೈತರನ್ನು ಇದ್ದಾರೆ. ಜೊತೆಗೆ ಜಿಲ್ಲಾ ಮಟ್ಟ ಹಾಗೂ ಎಲ್ಲಾ ತಾಲ್ಲೂಕಿನಲ್ಲಿ ದಲಿತ ರೈತ ಸಂಘಟನೆ ಮಾಡುವ ಅಭಿಲಾಷೆ ಹೊಂದಿದ್ದೇವೆ ಎಂದರು.


ನಮ್ಮ ಜನಾಂಗದವರಿಗೆ ಯಾವುದೇ ರೀತಿಯಲ್ಲಿ ಸಮಸ್ಯೆಗಳು ನಡೆದಲ್ಲಿ ಇದರ ಬಗ್ಗೆ ಹೋರಾಟ ನಡೆಸಿ ನ್ಯಾಯ ಕೊಡಿಸುವ ಮೂಲಕ ಸಂಘಟನೆ ಬಲಗೊಳಿಸಬೇಕು. ಸದಸ್ಯತ್ವ ಹೆಚ್ಚಿಸುವ ಗುರಿ ಹೊಂದಿರುವುದಾಗಿ ತಿಳಿಸಿದರು.


ಈ ಸಂಧರ್ಭದಲ್ಲಿ ಚಂದಕವಾಡಿ ಹೋಬಳಿ ಪರಿಶಿಷ್ಟ ಜಾತಿ ರೈತ ಸಂಘ ಕರ್ನಾಟಕ ಅಧ್ಯಕ್ಷ ಸೋಮಣ್ಣ, ನಿರ್ದೇಶಕರು ಗುರುಸ್ವಾಮಿ, ಡಾ.ಶಿವಕುಮಾರ್, ಶಿವಬಸವಣ್ಣ, ಮಾದು ಹಾಗೂ ಸಿದ್ದಯ್ಯನಪುರ ಕೆಂಪರಾಜು, ದಾಸನಪುರ ಶಿವಕುಮಾರ್, ಅಣ್ಣಪ್ಪಸ್ವಾಮಿ, ಸೋಮಣ್ಣ, ಮುಡಿಗುಂಡ ಚಾಮುಂಡಿ, ಕಾಮಗೆರೆ ಶಿವಕುಮಾರ್, ಕೆಂಪನಪಾಳ್ಯ ಶಿವಣ್ಣ, ಭೀಮನಗರ ಬಸವರಾಜು ಹಾಗೂ ಇನ್ನೀತರರು ಇದ್ದರು.

ವರದಿ : ನಿಂಪು ರಾಜೇಶ್

Releated Posts

ಕೊಳ್ಳೇಗಾಲ: ಪೌರಕಾರ್ಮಿಕರಿಗೆ ಊಟ ಬಡಿಸಿದ ಶಾಸಕ ಎ.ಆರ್. ಕೃಷ್ಣಮೂರ್ತಿ

ಕೊಳ್ಳೇಗಾಲ. ಸಮಾಜದಲ್ಲಿ ಕೊಳಕು ಮುಕ್ತ ಪ್ರದೇಶವಾಗಲು ಪೌರಕಾರ್ಮಿಕರು ಮುಖ್ಯ ಕಾರಣವಾಗಿದೆ ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ಅವರು ಹೇಳಿದರು. ಪಟ್ಟಣದ ಸಿಡಿಎಸ್ ಭವನದಲ್ಲಿ ಬುಧವಾರ ಪೌರ…

ByByN Rajesh Feb 11, 2026

ಕೊಳ್ಳೇಗಾಲ ನಗರಸಭೆ – ಜಿಲ್ಲಾಧಿಕಾರಿ ಶ್ರೀ ರೂಪ ಅವರಿಂದ ಉಳಿತಾಯ ಬಜೆಟ್ ಮಂಡನೆ

ಕೊಳ್ಳೇಗಾಲ ನಗರಸಭೆಯ ೨೦೨೬-೨೭ನೇ ಸಾಲಿನ ಬಜೆಟ್‌ನ ಪಕ್ಷಿ ನೋಟ ಕೊಳ್ಳೇಗಾಲ, ಫೆ, ೧೦- ಕೊಳ್ಳೇಗಾಲ ನಗರಸಭೆಯ ಸಭಾಂಗಣದಲ್ಲಿ ಶಾಸಕ ಎ.ಆರ್. ಕೃಷ್ಣಮೂರ್ತಿಯವರ ಅಧ್ಯಕ್ಷತೆಯಲ್ಲಿ ಫೆ.೧೦…

ByByN Rajesh Feb 10, 2026

ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನಿರ್ದೇಶಕರ ಅಯ್ಕೆ

ಕೊಳ್ಳೇಗಾಲ. ಸತ್ತೇಗಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಕ್ಕೆ ಭಾನುವಾರ ಚುನಾವಣೆ ನಡೆಯಿತು. ಗ್ರಾಮದಲ್ಲಿ ನಡೆದ ಚುನಾವಣೆಯಲ್ಲಿ 8…

ByByN Rajesh Feb 9, 2026

ಕೊಳ್ಳೇಗಾಲ : ಗ್ಯಾರೆಂಟಿ ಯೋಜನೆಗಳಿಂದ ನವ ಕರ್ನಾಟಕ ನಿರ್ಮಾಣ – ಶಾಸಕ ಎ.ಆರ್.ಕೃಷ್ಣಮೂರ್ತಿ

ಸರ್ಕಾರದ ಅಭಿವೃದ್ಧಿ ಯೋಜನೆ, ಕಾರ್ಯಕ್ರಮಗಳು ನವಕರ್ನಾಟಕ ನಿರ್ಮಾಣಕ್ಕೆ ಸಹಕಾರಿ: ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಕೊಳ್ಳೇಗಾಲ. ರಾಜ್ಯಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಜನರ ಅಭಿವೃದ್ಧಿಗಾಗಿ…

ByByN Rajesh Jan 17, 2026

Leave a Reply

Your email address will not be published. Required fields are marked *

Scroll to Top