/* Change button hover color to red */
button:hover,
.wp-block-button__link:hover,
input[type="submit"]:hover {
    background-color: red !important;
    color: #fff !important; /* Makes text white for contrast */
}

  • Home
  • ಜಿಲ್ಲೆ
  • ಹನೂರು – ರಾಮಾಪುರದಲ್ಲಿ ಯಶಸ್ವಿಯಾಗಿ ನಡೆದ ಮಾಸಿಕ ಸಂತೆ
Image

ಹನೂರು – ರಾಮಾಪುರದಲ್ಲಿ ಯಶಸ್ವಿಯಾಗಿ ನಡೆದ ಮಾಸಿಕ ಸಂತೆ

ಹನೂರು : ತಾಲ್ಲೂಕು ಪಂಚಾಯಿತಿ ವತಿಯಿಂದ ಸಂಜೀವಿನಿ ಎನ್ ಆರ್ ಎಂ ಎಲ್ ಯೋಜನೆಯಡಿ ತಾಲೂಕಿನ ರಾಮಾಪುರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ಹತ್ತಿರ ಮಾಸಿಕ ಸಂತೆಯನ್ನು ರಾಮಾಪುರ ಪೊಲೀಸ್ ಸಬ್ ಇನ್ಸ್ ಫೆಕ್ಟರ್
ಈಶ್ವರ್ ರವರು ಉದ್ಘಾಟಿಸಿದರು.

ನಂತರ ಮಾತನಾಡಿದ ಈಶ್ವರ್ ತಾಲ್ಲೂಕಿನ ವಿವಿದ ಗ್ರಾಮ ಪಂಚಾಯಿತಿಗಳ ಮಹಿಳಾ ಸ್ವ ಸಹಾಯ ಗುಂಪುಗಳ ಒಕ್ಕೂಟಗಳಿಂದ ಮಹಿಳೆಯರು ಉತ್ಪಾದನೆ ಮಾಡಿರುವ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಿಸುವ ಸಲುವಾಗಿ ಮಾಸಿಕ ಸಂತೆ ಏರ್ಪಡಿಸುತ್ತಿರುವುದು ಮಹಿಳೆಯರಿಗೆ ತುಂಬಾ ಉಪಯೋಗವಾಗುತ್ತದೆ.

ಈ ಪ್ರಕ್ರಿಯೆಯು ಮಹಿಳೆಯರ ಆರ್ಥಿಕ ಅಭಿವೃದ್ಧಿಗೆ ಸಹಾಯಕವಾಗಿದ್ದು, ಇದರಿಂದ ಮಹಿಳೆಯರು ಸ್ವಾಲಂಬನೆಯಿಂದ ಜೀವನ ನಿರ್ವಹಣೆ ಮಾಡಲು ಅನುಕೂಲವಾಗಲಿದೆ. ಮಹಿಳೆಯರು ಕುಟುಂಬಕ್ಕೆ ಮಾದರಿಯಾಗಿದ್ದು, ಮಾದಕ ಮುಕ್ತ ಕರ್ನಾಟಕ ಅಭಿಯಾನದಡಿ ಕುಟುಂಬಸ್ಥರು ಮತ್ತು ನೆರೆಹೊರೆಯವರು ಮಾದಕ ವ್ಯಸನದಿಂದ ಮುಕ್ತಗೊಳಿಸಲು ಪ್ರಯತ್ನಿಸಿ. ಮುಂದಿನ ಯುವಪೀಳಿಗೆ ಮಾದಕ ವಸ್ತುಗಳ ಚಟದಿಂದ ಮುಕ್ತರಾಗಲು ಪಣತೊಡಬೇಕೆಂದು ತಿಳಿಸಿದರು.

ಬಾಲ್ಯವಿವಾಹ ಮತ್ತು ಪೋಕ್ಸೋ ಪ್ರಕರಣಗಳು ಸಾರ್ವಜನಿಕವಾಗಿ ನಿಮ್ಮ ಹತ್ತಿರ ನೆರೆಹೊರೆಯಲ್ಲಿ ಕಂಡುಬಂದರೆ ತಕ್ಷಣ ಸರ್ಕಾರಿ ಸಹಾಯವಾಣಿಗೆ ಕರೆಮಾಡಿ ತಿಳಿಸಬೇಕೆಂದು ಎಲ್ಲರಿಗೂ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ತಾಲ್ಲೂಕು ಎನ್.ಆರ್.ಎಲ್.ಎಂ ವಲಯ ಮೇಲ್ವಿಚಾರಕರಾದ ಕುಮಾರಿ.ಸಿ, ತಾಲ್ಲೂಕು ವ್ಯವಸ್ಥಾಪಕರಾದ ಲಿಂಗರಾಜು.ಬಿ, ಪೋಲೀಸ್ ಇಲಾಖೆಯ ಸಿಬ್ಬಂದಿಗಳು ತಾಲ್ಲೂಕು ಸಂಜೀವಿನಿ ಸಿಬ್ಬಂದಿಗಳು, ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳ ಸಮುದಾಯ ಸಂಪನ್ಮೂಲ ವ್ಯಕ್ತಿಗಳು ಉಪಸ್ಥಿತರಿದ್ದರು.

ವರದಿ : ಸಾಗರ್ ನಿಂಪು

Releated Posts

ಕೊಳ್ಳೇಗಾಲದಲ್ಲಿ ವಾಲ್ಮೀಕಿ ಜಯಂತಿ ಅದ್ದೂರಿ ಮೆರವಣಿಗೆಗೆ ಶಾಸಕ ಎ.ಆರ್. ಕೃಷ್ಣಮೂರ್ತಿ ಚಾಲನೆ

ಕೊಳ್ಳೇಗಾಲ. ಮಹರ್ಷಿ ಶ್ರೀ ವಾಲ್ಮೀಕಿ ಜಯಂತಿ ಅಂಗವಾಗಿ ಮಂಗಳವಾರ ಅದ್ದೂರಿಯಾಗಿ ಬೆಳ್ಳಿ ರಥ ಮೆರವಣಿಗೆ ನಡೆಯಿತು.ಪಟ್ಟಣದ ನಾಯಕರ ಬೀದಿಯಲ್ಲಿ ಅಲಂಕೃತಗೊಂಡಿದ್ದ ರಥದಲ್ಲಿದ್ದ ವಾಲ್ಮೀಕಿ ಭಾವಚಿತ್ರಕ್ಕೆ…

ByByN RajeshOct 7, 2025

ಶಾಸಕ ಎ.ಆರ್. ಕೃಷ್ಣಮೂರ್ತಿ ಅವರಿಗೆ ಸಚಿವರಾಗುವ ಅರ್ಹತೆ ಮತ್ತು ಸಾಮರ್ಥ್ಯ ಇದೆ – ಸಂಸದ ಸುನೀಲ್ ಬೋಸ್

ಕೊಳ್ಳೇಗಾಲ : ಕೊಳ್ಳೇಗಾಲ ಶಾಸಕ ಎ.ಆರ್. ಕೃಷ್ಣಮೂರ್ತಿ ಅವರಿಗೆ ಸಚಿವರಾಗುವ ಅರ್ಹತೆ ಮತ್ತು ಸಾಮರ್ಥ್ಯ ಎರಡೂ ಇದೆ ಎಂದು ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸತ್‌…

ByByN RajeshOct 6, 2025

ಹುಲಿಗಳ ಸಾವಿನ ಸಮಗ್ರ ತನಿಖೆಗೆ ಶಾಸಕ ಎಂ.ಆರ್. ಮಂಜುನಾಥ್ ಒತ್ತಾಯ

ಹನೂರು : ತಾಲೂಕಿನ ಪಚ್ಚೆದೊಡ್ಡಿ ಅರಣ್ಯ ಪ್ರದೇಶದಲ್ಲಿ ಹುಲಿ ಸಾವನ್ನಪ್ಪಿರುವ ಬಗ್ಗೆ ಸರ್ಕಾರ ಗಂಭೀರವಾಗಿ ಪ್ರಕರಣವನ್ನು ಕೈಗೆತ್ತಿಕೊಂಡು ಸಂಬಂಧಿಸಿದ ಹಿರಿಯ ಅಧಿಕಾರಿಗಳ ತಂಡ ರಚನೆ…

ByByN RajeshOct 3, 2025

ಕೊಳ್ಳೇಗಾಲ ದಿಂದ ಅಂಬೇಡ್ಕರ್ ಧೀಕ್ಷಾ ಭುಮಿಗೆ ಹೊರಟ ವಾಹನಗಳಿಗೆ ಶಾಸಕ ಎ.ಆರ್.ಕೃಷ್ಣಮೂರ್ತಿ ಹಸಿರು ನಿಶಾನೆ

ಕೊಳ್ಳೇಗಾಲ ಸುದ್ದಿ ದೀಕ್ಷಾಭೂಮಿ ಯಾತ್ರೆಗೆ ಚಾಲನೆ ನೀಡಿದ ಶಾಸಕ ಎ. ಆರ್ ಕೃಷ್ಣಮೂರ್ತಿ ಡಾ. ಬಿ. ಆರ್. ಅಂಬೇಡ್ಕರ್ ರವರು ಲಕ್ಷಾಂತರ ಅನುಯಾಯಿಗಳೊಡನೆ ಬೌದ್ಧ…

ByByN RajeshSep 30, 2025

Leave a Reply

Your email address will not be published. Required fields are marked *

Scroll to Top