ಕೊಳ್ಳೇಗಾಲ-ಪ್ರಸ್ತುತ ಬಜೆಟ್ ನಲ್ಲಿ ಹನೂರು ಕ್ಷೇತ್ರದ ನೀರಾವರಿ ಯೋಜನೆಗಳಿಗೆ 490 ಕೋಟಿ ಅನುದಾನ ನೀಡುವ ಮೂಲಕ ಕ್ಷೇತ್ರದ ಜನರಿಗೆ ಮತ್ತು ರೈತರಿಗೆ ರಾಜ್ಯದ ಕಾಂಗ್ರೆಸ್ ಸರ್ಕಾರ ಉತ್ತಮ ಕೊಡುಗೆ ನೀಡಿದೆ ಎಂದು ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ವಕ್ತಾರ ಎಸ್.ಶಿವಕುಮಾರ್ ಮಧುವನಹಳ್ಳಿ ಅವರು ತಿಳಿಸಿದ್ದಾರೆ.
ಕಳೆದ ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಸಚಿವ ಮಹಾದೇವಪ್ಪ ಮತ್ತು ಸುನೀಲ್ ಬೋಸ್ ಅವರು.. ಈ ಭಾಗದ ರೈತರ ನೀರಾವರಿ ಸಮಸ್ಯೆಗಳನ್ನು ಅರ್ಥ ಮಾಡಿ ಕೊಂಡು ಮುಂದಿನ ದಿನಗಳಲ್ಲಿ ನೀರಾವರಿ ಯೋಜನೆಗಳನ್ನು ರೂಪಿಸುವ ಮೂಲಕ ಹನೂರು ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡುವುದಾಗಿ ಭರವಸೆಯನ್ನು ನೀಡಿದ್ದರು.
ಅದರಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನ ಸೆಳೆದು ಹನೂರು ನೀರಾವರಿ ಯೋಜನೆಗಳಿಗೆ ಬಜೆಟ್ ನಲ್ಲಿ ಒಪ್ಪಿಗೆ ಕೊಡಿಸಲಾಗಿದೆ. ಆ ಮೂಲಕ ಸಚಿವ ಮಹಾದೇವಪ್ಪ ಮತ್ತು ಸಂಸದ ಸುನೀಲ್ ಬೋಸ್ ಅವರು ಕ್ಷೇತ್ರದ ಜನತೆಗೆ ಮತ್ತು ರೈತರಿಗೆ ಕೊಟ್ಟ ಮಾತಿನಂತೆ ನಡೆದು ಕೊಂಡಿದ್ದಾರೆ.
ಮಾಜಿ ಶಾಸಕ ನರೇಂದ್ರ ಅವರೂ ಸಹ ಹನೂರು ಕ್ಷೇತ್ರದ ನೀರಾವರಿ ಯೋಜನೆಗಳಿಗೆ ಬಜೆಟ್ ನಲ್ಲಿ ಒಪ್ಪಿಗೆ ಸಿಗುವ ಕಾರ್ಯದಲ್ಲಿ ಮುಂಜಾಗ್ರತೆ ವಹಿಸಿ ಮುಖ್ಯಮಂತ್ರಿ ಗಳಲ್ಲಿ ಮನವಿ ಮಾಡಿ ಕೊಂಡಿದ್ದರು.
ಇದಲ್ಲದೆ.. ಕಳೆದ ಕೆಲವು ತಿಂಗಳಿಂದ ಹನೂರು ಕ್ಷೇತ್ರದಲ್ಲಿ ನೀರಾವರಿ ಯೋಜನೆಗಳನ್ನು ಕೈಗೆತ್ತಿ ಕೊಳ್ಳಬೇಕೆಂದು ರೈತರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಸಂಸದ ಸುನೀಲ್ ಬೋಸ್ ಅವರು..ರೈತರಿಗೆ ಭರವಸೆ ನೀಡಿ, ಮುಂದಿನ ಬಜೆಟ್ ನಲ್ಲಿ ನೀರಾವರಿ ಯೋಜನೆಗೆ ಅನುದಾನ ಮಂಜೂರು ಮಾಡಿಸುವುದಾಗಿ ಭರವಸೆ ನೀಡಿದ್ದರು. ಕೊಟ್ಟ ಮಾತಿನಂತೆ ನೀರಾವರಿ ಯೋಜನೆಗೆ 490 ಕೋಟಿ ಮಂಜೂರು ಮಾಡಿಸಿದ್ದಾರೆ ಕ್ಷೇತ್ರದ ಜನತೆ ಮತ್ತು ರೈತರ ಪರವಾಗಿ ಸಚಿವ ಮಹಾದೇವಪ್ಪ ಮತ್ತು ಸಂಸದ ಸುನೀಲ್ ಬೋಸ್ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ವಕ್ತಾರ ಮಧುವನಹಳ್ಳಿ ಶಿವಕುಮಾರ್ ತಿಳಿಸಿದ್ದಾನೆ.

ಈ ಸುದ್ದಿಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ನಮ್ಮ ವೆಬ್‌ಸೈಟ್ ಅನ್ನು ನಿಯಮಿತವಾಗಿ ಭೇಟಿ ನೀಡಿ. ಈ ಬೆಳವಣಿಗೆಯ ಬಗ್ಗೆ ಹೆಚ್ಚಿನ ವಿವರಗಳು ಬಂದಂತೆ ನಾವು ನಿಮ್ಮನ್ನು ಅಪ್‌ಡೇಟ್ ಮಾಡುತ್ತೇವೆ. ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳಿಗಾಗಿ ರಾ.ಪವರ್ 28 ಅನ್ನು ಅನುಸರಿಸಿ.