/* Change button hover color to red */
button:hover,
.wp-block-button__link:hover,
input[type="submit"]:hover {
    background-color: red !important;
    color: #fff !important; /* Makes text white for contrast */
}

  • Home
  • ಜಿಲ್ಲೆ
  • ಕೊಳ್ಳೇಗಾಲ: ರಸ್ತೆ ಅಗಲೀಕರಣಕ್ಕೆ ಪ್ರಾಮಾಣಿಕ ಪ್ರಯತ್ನ – ಶಾಸಕ ಎ.ಆರ್. ಕೃಷ್ಣಮೂರ್ತಿ
Image

ಕೊಳ್ಳೇಗಾಲ: ರಸ್ತೆ ಅಗಲೀಕರಣಕ್ಕೆ ಪ್ರಾಮಾಣಿಕ ಪ್ರಯತ್ನ – ಶಾಸಕ ಎ.ಆರ್. ಕೃಷ್ಣಮೂರ್ತಿ

ವರದಿ : ನಿಂಪು ಸಾಗರ್

ಕೊಳ್ಳೇಗಾಲ: ಕೊಳ್ಳೇಗಾಲ ಪಟ್ಟಣದ ಎರಡು ಮುಖ್ಯ ರಸ್ತೆಗಳ ಅಗಲೀಕರಣಕ್ಕೆ ಅನುಮೋದನೆ ಕೊಡಿಸಲಾಗುವುದು, ಎ. ಆರ್ ಕೃಷ್ಣಮೂರ್ತಿ ಅವರು
ಕೊಳ್ಳೇಗಾಲ ನಗರಸಭೆಯಲ್ಲಿ ನಡೆದ ಸಭೆಯಲ್ಲಿ ತಿಳಿಸಿದರು.

ನಗರಸಭೆಯಲ್ಲಿ ನಡೆದಿರುವ ಅಭಿವೃದ್ಧಿ ಕೆಲಸ ಕಾರ್ಯಗಳ ಬಗ್ಗೆ ಮಾಹಿತಿ ಪಡೆದರು ನಂತರ ಪಟ್ಟಣದ ಡಾ ರಾಜ್ ಕುಮಾರ್ ರಸ್ತೆ, ಡಾ. ಬಿ. ಆರ್.ಅಂಬೇಡ್ಕರ್ ರಸ್ತೆ ಅಗಲೀಕರಣ ವಿಚಾರವಾಗಿ ಅಧಿಕಾರಿಗಳೊಡನೆ ದೀರ್ಘವಾಗಿ ಚರ್ಚಿಸಿದರು.

ನಂತರ ಮಾಧ್ಯಮದವರ ಜೊತೆ ಮಾತನಾಡಿ ಪಟ್ಟಣದಲ್ಲಿ ರಸ್ತೆ ಅಗಲೀಕರಣಕ್ಕೆ ಸಾಕಷ್ಟು ಪ್ರಯತ್ನ ಮಾಡುತ್ತಿದ್ದೇವೆ ನನಗಿಂತ ಮೊದಲು ಇದ್ದ ಶಾಸಕರು ಕೂಡ ಪಟ್ಟಣದಲ್ಲಿ ರಸ್ತೆ ಅಗಲೀಕರಣಕ್ಕೆ ಪ್ರಾಮಾಣಿಕವಾಗಿ ಪ್ರಯತ್ನ ಮಾಡಿದ್ದಾರೆ ಪಟ್ಟಣದಲ್ಲಿ ರಸ್ತೆ ಅಗಲೀಕರಣಕ್ಕೆ ನಗರಸಭೆಯಿಂದ ಪ್ರಸ್ತಾವನೆಯನ್ನು ಸಿದ್ದಪಡಿಸಿ ಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಮ್ಮ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಯವರ ಮುಖಾಂತರ ಮುಖ್ಯಮಂತ್ರಿಗಳು ಮತ್ತು ಸಚಿವರ ಸಮ್ಮುಖದಲ್ಲಿ ಮಂಡಿಸಿ ಅನುಮೋದನೆಯನ್ನ ದೊರಕಿಸಿ ಕೊಡಬಹುದು ಎಂಬ ಆಶಾ ಭಾವನೆಯಿತ್ತು.

ನಗರಸಭೆಯ ಕಳೆದ ಸಾಮಾನ್ಯ ಸಭೆಯಲ್ಲಿ ಈ ವಿಷಯ ವ್ಯಕ್ತ ಪಡಿಸಿದ್ದೆ. ರಸ್ತೆ ಅಗಲೀಕರಣ ಸಂಬಂಧಪಟ್ಟಂತೆ ಲೋಕೋಪಯೋಗಿ ಇಲಾಖೆಯವರು ಪ್ರಾಮಾಣಿಕವಾಗಿ ಪ್ರಯತ್ನಪಟ್ಟು ಒಂದು ನಕ್ಷೆ ಮಾಡಿ ಕೊಟ್ಟಿದ್ದರು ಆದರೆ ನಗರಸಭೆಯ ಅಧಿಕಾರಿಗಳು
ರಾಜ್ ಕುಮಾರ್ ರಸ್ತೆ ಹಾಗೂ ಅಂಬೇಡ್ಕರ್ ರಸ್ತೆ ಅಗಲೀಕರಣಕ್ಕೆ ಮಾಹಿತಿಯನ್ನು ಕೊಡಲು ಮುಂದಾಗಲಿಲ್ಲ.

ಕೆಷಿಪ್ ರಸ್ತೆ ಹಾಗೂ ಬೈಪಾಸ್ ರಸ್ತೆಯವರ ಮುಖಾಂತರವೇ ಒಪ್ಪಿಸಿ. ನಗರಸಭೆಯವರು
ರಾಜ್ ಕುಮಾರ್ ರಸ್ತೆ, ಅಂಬೇಡ್ಕರ್ ರಸ್ತೆಯಲ್ಲಿ ಖಾಸಗಿ ಜಾಗ ಮತ್ತು ಸರ್ಕಾರಿ ಜಾಗವನ್ನು ಗುರುತಿಸಿ ಪ್ರಸ್ತಾವನೆಯನ್ನು ಸಿದ್ದಪಡಿಸಿ ಕೊಟ್ಟರೆ ಮುಂದಿನ ದಿನಗಳಲ್ಲಿ ರಸ್ತೆ ಅಗಲೀಕರಣ ಕಾಮಗಾರಿಯನ್ನು ನಡೆಸಬಹುದು ಎಂದರು.

ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ರೇಖಾ ರಮೇಶ್, ಉಪಾಧ್ಯಕ್ಷ ಎ. ಪಿ. ಶಂಕರ್, ಸದಸ್ಯರಾದ ಶಾಂತರಾಜು, ಮಂಜುನಾಥ್, ನಗರಸಭೆ ಆಯುಕ್ತ ರಮೇಶ್, ಇಂಜಿನಿಯರ್ ನಾಗೇಂದ್ರ,ಹಾಗೂ ಇನ್ನಿತರರು ಇದ್ದರು

Releated Posts

ಹೊಸ ಹಂಪಾಪುರ ಗ್ರಾಮದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಕೊಳ್ಳೇಗಾಲ :ಹೊಸ ಹಂಪಾಪುರದ ಕರವೇ ಗ್ರಾಮ ಘಟಕದಿಂದ ಕನ್ನಡ ರಾಜ್ಯೋತ್ಸವ ಆಚರಣೆ ಕೊಳ್ಳೇಗಾಲ:ತಾಲೂಕಿನ ಹೊಸ ಹಂಪಾಪುರ ಗ್ರಾಮದಲ್ಲಿ ಇಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್…

ByByN RajeshNov 30, 2025

ಕೊಳ್ಳೇಗಾಲ ತಾಲ್ಲೂಕಿನ ಮಧುವನಹಳ್ಳಿ ಗ್ರಾಮದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಕೊಳ್ಳೇಗಾಲ. ಜಯಕರ್ನಾಟಕ ಸಂಘಟನೆ ಮಧುವನಹಳ್ಳಿ ಗ್ರಾಮ ಘಟಕ ವತಿಯಿಂದ ಭಾನುವಾರ 70 ನೇ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಣೆ ಮಾಡಿದರು. ತಾಲ್ಲೂಕಿನ ಮಧುವನಹಳ್ಳಿ ಗ್ರಾಮದಲ್ಲಿ…

ByByN RajeshNov 30, 2025

ಕೊಳ್ಳೇಗಾಲದ ವಸಂತ ಕುಮಾರಿ ಕಾಲೇಜಿನಲ್ಲಿ ಯುವ ಸೌರಭ ಕಾರ್ಯಕ್ರಮ

ಕೊಳ್ಳೇಗಾಲ. ಪಟ್ಟಣದ ಎಸ್.ವಿ.ಕೆ ಬಾಲಕಿಯರ ಪದವಿಪೂರ್ವ ಕಾಲೇಜು ಆವರಣದಲ್ಲಿ ನಡೆದ ಯುವ ಸೌರಭ-2025 ಕಾರ್ಯಕ್ರಮವನ್ನು ಶಾಸಕ ಎ.ಆರ್.ಕೃಷ್ಣಮೂರ್ತಿ ಅವರು ಉದ್ಘಾಟನೆ ಮಾಡಿದರು. ಜಿಲ್ಲಾಡಳಿತ, ಜಿ.ಪಂ…

ByByN RajeshNov 30, 2025

ಪ್ರತಿಭಾ ಕಾರಂಜಿಯಲ್ಲಿ ಕೆಂಪನಪಾಳ್ಯ ಶಾಲಾ ಮಕ್ಕಳಿಗೆ ಅತಿ ಹೆಚ್ಚು ಬಹುಮಾನ

ಕೊಳ್ಳೇಗಾಲ: ಕೊಳ್ಳೇಗಾಲ ತಾಲೂಕಿನ ಕೆಂಪನಪಾಳ್ಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳು ಪ್ರತಿಭಾ ಕಾರಂಜಿಯಲ್ಲಿ ಪಾಲ್ಗೊಂಡು ಅತಿ ಹೆಚ್ಚು ಬಹುಮಾನವನ್ನು ಪಡೆದು ಕೊಂಡಿದ್ದಾರೆ. ಕೆಂಪನಪಾಳ್ಯ…

ByByN RajeshNov 29, 2025

Leave a Reply

Your email address will not be published. Required fields are marked *

Scroll to Top