/* Change button hover color to red */
button:hover,
.wp-block-button__link:hover,
input[type="submit"]:hover {
    background-color: red !important;
    color: #fff !important; /* Makes text white for contrast */
}

  • Home
  • ಜಿಲ್ಲೆ
  • ಕೊಳ್ಳೇಗಾಲ: ರಸ್ತೆ ಅಗಲೀಕರಣಕ್ಕೆ ಪ್ರಾಮಾಣಿಕ ಪ್ರಯತ್ನ – ಶಾಸಕ ಎ.ಆರ್. ಕೃಷ್ಣಮೂರ್ತಿ
Image

ಕೊಳ್ಳೇಗಾಲ: ರಸ್ತೆ ಅಗಲೀಕರಣಕ್ಕೆ ಪ್ರಾಮಾಣಿಕ ಪ್ರಯತ್ನ – ಶಾಸಕ ಎ.ಆರ್. ಕೃಷ್ಣಮೂರ್ತಿ

ವರದಿ : ನಿಂಪು ಸಾಗರ್

ಕೊಳ್ಳೇಗಾಲ: ಕೊಳ್ಳೇಗಾಲ ಪಟ್ಟಣದ ಎರಡು ಮುಖ್ಯ ರಸ್ತೆಗಳ ಅಗಲೀಕರಣಕ್ಕೆ ಅನುಮೋದನೆ ಕೊಡಿಸಲಾಗುವುದು, ಎ. ಆರ್ ಕೃಷ್ಣಮೂರ್ತಿ ಅವರು
ಕೊಳ್ಳೇಗಾಲ ನಗರಸಭೆಯಲ್ಲಿ ನಡೆದ ಸಭೆಯಲ್ಲಿ ತಿಳಿಸಿದರು.

ನಗರಸಭೆಯಲ್ಲಿ ನಡೆದಿರುವ ಅಭಿವೃದ್ಧಿ ಕೆಲಸ ಕಾರ್ಯಗಳ ಬಗ್ಗೆ ಮಾಹಿತಿ ಪಡೆದರು ನಂತರ ಪಟ್ಟಣದ ಡಾ ರಾಜ್ ಕುಮಾರ್ ರಸ್ತೆ, ಡಾ. ಬಿ. ಆರ್.ಅಂಬೇಡ್ಕರ್ ರಸ್ತೆ ಅಗಲೀಕರಣ ವಿಚಾರವಾಗಿ ಅಧಿಕಾರಿಗಳೊಡನೆ ದೀರ್ಘವಾಗಿ ಚರ್ಚಿಸಿದರು.

ನಂತರ ಮಾಧ್ಯಮದವರ ಜೊತೆ ಮಾತನಾಡಿ ಪಟ್ಟಣದಲ್ಲಿ ರಸ್ತೆ ಅಗಲೀಕರಣಕ್ಕೆ ಸಾಕಷ್ಟು ಪ್ರಯತ್ನ ಮಾಡುತ್ತಿದ್ದೇವೆ ನನಗಿಂತ ಮೊದಲು ಇದ್ದ ಶಾಸಕರು ಕೂಡ ಪಟ್ಟಣದಲ್ಲಿ ರಸ್ತೆ ಅಗಲೀಕರಣಕ್ಕೆ ಪ್ರಾಮಾಣಿಕವಾಗಿ ಪ್ರಯತ್ನ ಮಾಡಿದ್ದಾರೆ ಪಟ್ಟಣದಲ್ಲಿ ರಸ್ತೆ ಅಗಲೀಕರಣಕ್ಕೆ ನಗರಸಭೆಯಿಂದ ಪ್ರಸ್ತಾವನೆಯನ್ನು ಸಿದ್ದಪಡಿಸಿ ಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಮ್ಮ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಯವರ ಮುಖಾಂತರ ಮುಖ್ಯಮಂತ್ರಿಗಳು ಮತ್ತು ಸಚಿವರ ಸಮ್ಮುಖದಲ್ಲಿ ಮಂಡಿಸಿ ಅನುಮೋದನೆಯನ್ನ ದೊರಕಿಸಿ ಕೊಡಬಹುದು ಎಂಬ ಆಶಾ ಭಾವನೆಯಿತ್ತು.

ನಗರಸಭೆಯ ಕಳೆದ ಸಾಮಾನ್ಯ ಸಭೆಯಲ್ಲಿ ಈ ವಿಷಯ ವ್ಯಕ್ತ ಪಡಿಸಿದ್ದೆ. ರಸ್ತೆ ಅಗಲೀಕರಣ ಸಂಬಂಧಪಟ್ಟಂತೆ ಲೋಕೋಪಯೋಗಿ ಇಲಾಖೆಯವರು ಪ್ರಾಮಾಣಿಕವಾಗಿ ಪ್ರಯತ್ನಪಟ್ಟು ಒಂದು ನಕ್ಷೆ ಮಾಡಿ ಕೊಟ್ಟಿದ್ದರು ಆದರೆ ನಗರಸಭೆಯ ಅಧಿಕಾರಿಗಳು
ರಾಜ್ ಕುಮಾರ್ ರಸ್ತೆ ಹಾಗೂ ಅಂಬೇಡ್ಕರ್ ರಸ್ತೆ ಅಗಲೀಕರಣಕ್ಕೆ ಮಾಹಿತಿಯನ್ನು ಕೊಡಲು ಮುಂದಾಗಲಿಲ್ಲ.

ಕೆಷಿಪ್ ರಸ್ತೆ ಹಾಗೂ ಬೈಪಾಸ್ ರಸ್ತೆಯವರ ಮುಖಾಂತರವೇ ಒಪ್ಪಿಸಿ. ನಗರಸಭೆಯವರು
ರಾಜ್ ಕುಮಾರ್ ರಸ್ತೆ, ಅಂಬೇಡ್ಕರ್ ರಸ್ತೆಯಲ್ಲಿ ಖಾಸಗಿ ಜಾಗ ಮತ್ತು ಸರ್ಕಾರಿ ಜಾಗವನ್ನು ಗುರುತಿಸಿ ಪ್ರಸ್ತಾವನೆಯನ್ನು ಸಿದ್ದಪಡಿಸಿ ಕೊಟ್ಟರೆ ಮುಂದಿನ ದಿನಗಳಲ್ಲಿ ರಸ್ತೆ ಅಗಲೀಕರಣ ಕಾಮಗಾರಿಯನ್ನು ನಡೆಸಬಹುದು ಎಂದರು.

ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ರೇಖಾ ರಮೇಶ್, ಉಪಾಧ್ಯಕ್ಷ ಎ. ಪಿ. ಶಂಕರ್, ಸದಸ್ಯರಾದ ಶಾಂತರಾಜು, ಮಂಜುನಾಥ್, ನಗರಸಭೆ ಆಯುಕ್ತ ರಮೇಶ್, ಇಂಜಿನಿಯರ್ ನಾಗೇಂದ್ರ,ಹಾಗೂ ಇನ್ನಿತರರು ಇದ್ದರು

Releated Posts

ಕೊಳ್ಳೇಗಾಲ: ಪೌರಕಾರ್ಮಿಕರಿಗೆ ಊಟ ಬಡಿಸಿದ ಶಾಸಕ ಎ.ಆರ್. ಕೃಷ್ಣಮೂರ್ತಿ

ಕೊಳ್ಳೇಗಾಲ. ಸಮಾಜದಲ್ಲಿ ಕೊಳಕು ಮುಕ್ತ ಪ್ರದೇಶವಾಗಲು ಪೌರಕಾರ್ಮಿಕರು ಮುಖ್ಯ ಕಾರಣವಾಗಿದೆ ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ಅವರು ಹೇಳಿದರು. ಪಟ್ಟಣದ ಸಿಡಿಎಸ್ ಭವನದಲ್ಲಿ ಬುಧವಾರ ಪೌರ…

ByByN Rajesh Feb 11, 2026

ಕೊಳ್ಳೇಗಾಲ ನಗರಸಭೆ – ಜಿಲ್ಲಾಧಿಕಾರಿ ಶ್ರೀ ರೂಪ ಅವರಿಂದ ಉಳಿತಾಯ ಬಜೆಟ್ ಮಂಡನೆ

ಕೊಳ್ಳೇಗಾಲ ನಗರಸಭೆಯ ೨೦೨೬-೨೭ನೇ ಸಾಲಿನ ಬಜೆಟ್‌ನ ಪಕ್ಷಿ ನೋಟ ಕೊಳ್ಳೇಗಾಲ, ಫೆ, ೧೦- ಕೊಳ್ಳೇಗಾಲ ನಗರಸಭೆಯ ಸಭಾಂಗಣದಲ್ಲಿ ಶಾಸಕ ಎ.ಆರ್. ಕೃಷ್ಣಮೂರ್ತಿಯವರ ಅಧ್ಯಕ್ಷತೆಯಲ್ಲಿ ಫೆ.೧೦…

ByByN Rajesh Feb 10, 2026

ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನಿರ್ದೇಶಕರ ಅಯ್ಕೆ

ಕೊಳ್ಳೇಗಾಲ. ಸತ್ತೇಗಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಕ್ಕೆ ಭಾನುವಾರ ಚುನಾವಣೆ ನಡೆಯಿತು. ಗ್ರಾಮದಲ್ಲಿ ನಡೆದ ಚುನಾವಣೆಯಲ್ಲಿ 8…

ByByN Rajesh Feb 9, 2026

ಕೊಳ್ಳೇಗಾಲ : ಗ್ಯಾರೆಂಟಿ ಯೋಜನೆಗಳಿಂದ ನವ ಕರ್ನಾಟಕ ನಿರ್ಮಾಣ – ಶಾಸಕ ಎ.ಆರ್.ಕೃಷ್ಣಮೂರ್ತಿ

ಸರ್ಕಾರದ ಅಭಿವೃದ್ಧಿ ಯೋಜನೆ, ಕಾರ್ಯಕ್ರಮಗಳು ನವಕರ್ನಾಟಕ ನಿರ್ಮಾಣಕ್ಕೆ ಸಹಕಾರಿ: ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಕೊಳ್ಳೇಗಾಲ. ರಾಜ್ಯಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಜನರ ಅಭಿವೃದ್ಧಿಗಾಗಿ…

ByByN Rajesh Jan 17, 2026

Leave a Reply

Your email address will not be published. Required fields are marked *

Scroll to Top