/* Change button hover color to red */
button:hover,
.wp-block-button__link:hover,
input[type="submit"]:hover {
    background-color: red !important;
    color: #fff !important; /* Makes text white for contrast */
}

  • Home
  • ಜಿಲ್ಲೆ
  • ಕೊಳ್ಳೇಗಾಲ ಅಂಬೇಡ್ಕರ್ ಭವನ ಕಾಮಗಾರಿಗೆ ತಾತ್ಕಾಲಿಕ ತಡೆ : ಬೀಗ ಜಡಿದ ಕೆ.ಆರ್. ಐ.ಡಿ.ಎಲ್. ಅಧಿಕಾರಿ
Image

ಕೊಳ್ಳೇಗಾಲ ಅಂಬೇಡ್ಕರ್ ಭವನ ಕಾಮಗಾರಿಗೆ ತಾತ್ಕಾಲಿಕ ತಡೆ : ಬೀಗ ಜಡಿದ ಕೆ.ಆರ್. ಐ.ಡಿ.ಎಲ್. ಅಧಿಕಾರಿ

ಕೊಳ್ಳೇಗಾಲ: ಕೊಳ್ಳೇಗಾಲ ಪಟ್ಟಣದಲ್ಲಿ ನಿರ್ಮಾಣ ಆಗುತ್ತಿರುವ ಸುಸಜ್ಜಿತ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಯನ್ನು ಕೆ.ಆರ್.ಐ.ಡಿ.ಎಲ್ ಹಿರಿಯ ಅಧಿಕಾರಿಗಳ ಸೂಚನೆಯ ಮೇರೆಗೆ ಗುರವಾರದಿಂದ ಭವನ ಕಾಮಗಾರಿಯನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ.

ಬೆಂಗಳೂರು ಕೆ.ಆರ್. ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕರಿಂದ ಬಂದ ಆದೇಶದ ಮೇರೆಗೆ ಕೊಳ್ಳೇಗಾಲ ಕೆ.ಆರ್.ಐ.ಡಿ.ಎಲ್. ಸಹಾಯಕ ಅಭಿಯಂತರರಾದ ಚಿಕ್ಕಲಿಂಗಯ್ಯ ಅವರು ಗುರುವಾರ ಸಾಯಂಕಾಲ ಅಂಬೇಡ್ಕರ್ ಭವನಕ್ಕೆ ತೆರಳಿ ಕಾಮಗಾರಿಯನ್ನು ನಿಲ್ಲಿಸಿ ಮುಂಬಾಗಿಲಿಗೆ ಬೀಗ ಜಡಿದಿದ್ದಾರೆ.

ಈ ಬೆಳವಣಿಗೆಯಿಂದ ಇದೇ ತಿಂಗಳು 29 ರಂದು ಅಂಬೇಡ್ಕರ್ ಭವನ ಉದ್ಘಾಟನೆಗೆ ಮುಂದಾಗಿದ್ದ ಆನಂದಮೂರ್ತಿ ಅದ್ಯಕ್ಷರಾಗಿರುವ ಡಾ.ಬಿ.ಆರ್. ಅಂಬೇಡ್ಕರ್ ಸ್ಮಾರಕ ಸಂಘಕ್ಕೆ ಹಿನ್ನಡೆಯಾಗಿದೆ ಎಂದು ಹೇಳಲಾಗುತ್ರಿದೆ.

ಅಂಬೇಡ್ಕರ್ ಭವನ ಕಾಮಗಾರಿ ಪೂರ್ಣಗೊಳ್ಳದೇ ಭವನ ಉದ್ಘಾಟನೆಗೆ ಮುಂದಾಗಿರುವ ಸ್ಮಾರಕ ಸಂಘದ ನಿರ್ಧಾರವನ್ನು ಪ್ರಶ್ನಿಸಿ ಭೀಮನಗರದ ಅನೇಕರು ಕುಲದವರಿಗೆ ಪತ್ರ ನೀಡಿದ್ದಾರೆ. ಇದೇ ವಿಷಯವಾಗಿ ಶನಿವಾರ ಬೆಳಿಗ್ಗೆ ಭೀಮ ನಗರದಲ್ಲಿ ಕುಲಸ್ಥರ ಸಭೆ ಕರೆಯಲಾಗಿದೆ ಎಂದು ತಿಳಿದು ಬಂದಿದೆ.

ಭೀಮನಗರದ ಜನತೆಯ ಸಮ್ಮುಖದಲ್ಲಿ ಅಂಬೇಡ್ಕರ್ ಭವನ ಉದ್ಘಾಟನೆಗೆ ದಿನಾಂಕ ನಿಗದಿ ಮಾಡದೇ..ಕೇವಲ ಬೆರಳಣಿಕೆ ಮಂದಿ ಪತ್ರಿಕಾ ಗೋಷ್ಠಿಯಲ್ಲಿ ಇದೇ ತಿಂಗಳು 29 ರಂದು ಭವನ ಉದ್ಘಾಟನೆ ನಡೆಸುವ ಬಗ್ಗೆ ಹೇಳಿರುವುದು ಭೀಮನಗರದ ಅನೇಕ ಮುಖಂಡರನ್ನು ಕೆರಳಿಸಿದೆ.

ಅಂಬೇಡ್ಕರ್ ಭವನ ಕಾಮಗಾರಿ ಮೂಲನಕ್ಷೆಯಂತೆ ನಡೆದಿಲ್ಲ ಎಂಬುದು ಅನೇಕರ ಪ್ರಶ್ನೆ ಆಗಿದೆ.

ವರದಿ : ನಿಂಪು ಬ್ರದರ್ಸ್

Releated Posts

ಕೊಳ್ಳೇಗಾಲ: ಪೌರಕಾರ್ಮಿಕರಿಗೆ ಊಟ ಬಡಿಸಿದ ಶಾಸಕ ಎ.ಆರ್. ಕೃಷ್ಣಮೂರ್ತಿ

ಕೊಳ್ಳೇಗಾಲ. ಸಮಾಜದಲ್ಲಿ ಕೊಳಕು ಮುಕ್ತ ಪ್ರದೇಶವಾಗಲು ಪೌರಕಾರ್ಮಿಕರು ಮುಖ್ಯ ಕಾರಣವಾಗಿದೆ ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ಅವರು ಹೇಳಿದರು. ಪಟ್ಟಣದ ಸಿಡಿಎಸ್ ಭವನದಲ್ಲಿ ಬುಧವಾರ ಪೌರ…

ByByN Rajesh Feb 11, 2026

ಕೊಳ್ಳೇಗಾಲ ನಗರಸಭೆ – ಜಿಲ್ಲಾಧಿಕಾರಿ ಶ್ರೀ ರೂಪ ಅವರಿಂದ ಉಳಿತಾಯ ಬಜೆಟ್ ಮಂಡನೆ

ಕೊಳ್ಳೇಗಾಲ ನಗರಸಭೆಯ ೨೦೨೬-೨೭ನೇ ಸಾಲಿನ ಬಜೆಟ್‌ನ ಪಕ್ಷಿ ನೋಟ ಕೊಳ್ಳೇಗಾಲ, ಫೆ, ೧೦- ಕೊಳ್ಳೇಗಾಲ ನಗರಸಭೆಯ ಸಭಾಂಗಣದಲ್ಲಿ ಶಾಸಕ ಎ.ಆರ್. ಕೃಷ್ಣಮೂರ್ತಿಯವರ ಅಧ್ಯಕ್ಷತೆಯಲ್ಲಿ ಫೆ.೧೦…

ByByN Rajesh Feb 10, 2026

ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನಿರ್ದೇಶಕರ ಅಯ್ಕೆ

ಕೊಳ್ಳೇಗಾಲ. ಸತ್ತೇಗಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಕ್ಕೆ ಭಾನುವಾರ ಚುನಾವಣೆ ನಡೆಯಿತು. ಗ್ರಾಮದಲ್ಲಿ ನಡೆದ ಚುನಾವಣೆಯಲ್ಲಿ 8…

ByByN Rajesh Feb 9, 2026

ಕೊಳ್ಳೇಗಾಲ : ಗ್ಯಾರೆಂಟಿ ಯೋಜನೆಗಳಿಂದ ನವ ಕರ್ನಾಟಕ ನಿರ್ಮಾಣ – ಶಾಸಕ ಎ.ಆರ್.ಕೃಷ್ಣಮೂರ್ತಿ

ಸರ್ಕಾರದ ಅಭಿವೃದ್ಧಿ ಯೋಜನೆ, ಕಾರ್ಯಕ್ರಮಗಳು ನವಕರ್ನಾಟಕ ನಿರ್ಮಾಣಕ್ಕೆ ಸಹಕಾರಿ: ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಕೊಳ್ಳೇಗಾಲ. ರಾಜ್ಯಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಜನರ ಅಭಿವೃದ್ಧಿಗಾಗಿ…

ByByN Rajesh Jan 17, 2026

Leave a Reply

Your email address will not be published. Required fields are marked *

Scroll to Top