

ಕೊಳ್ಳೇಗಾಲ. ಸಮಾಜದಲ್ಲಿ ಕೊಳಕು ಮುಕ್ತ ಪ್ರದೇಶವಾಗಲು ಪೌರಕಾರ್ಮಿಕರು ಮುಖ್ಯ ಕಾರಣವಾಗಿದೆ ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ಅವರು ಹೇಳಿದರು.
ಪಟ್ಟಣದ ಸಿಡಿಎಸ್ ಭವನದಲ್ಲಿ ಬುಧವಾರ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಇದೇ ವೇಳೆ ಉತ್ತಮವಾಗಿ ಸೇವೆ ಸಲ್ಲಿಸಿದ್ದ ಪೌರಕಾರ್ಮಿಕರಿಗೆ, ನಿವೃತ್ತ ನೀರುಗಂಟಿ, ಪ್ರತಿಭಾವಂತ ವಿದ್ಯಾರ್ಥಿಗೆ ಸನ್ಮಾನಿಸಿ ಗೌರವಿಸಿದರು. ಕ್ರೀಡಾಕೂಟದಲ್ಲಿ ಭಾಗವಹಿಸಿ ಜಯಗಳಿದ್ದ ಪೌರಕಾರ್ಮಿಕರಿಗೆ ಬಹುಮಾನವನ್ನು ವಿತರಿಸಿದರು.
ಕಾರ್ಯಕ್ರಮದ ನಂತರ ಊಟದ ವ್ಯವಸ್ಥೆ ಮಾಡಲಾಗಿತ್ತು. ಈ ವೇಳೆ ಶಾಸಕ ಎ.ಆರ್. ಕೃಷ್ಣಮೂರ್ತಿ ಅವರು ಪೌರಕಾರ್ಮಿಕರಿಗೆ ಎಲೆ ಹಾಕಿ ಸಿಹಿ ಬಡಿಸಿ ಊಟ ಬಡಿಸುವ ಮೂಲಕ ಉತ್ತಮ ಜನಪ್ರತಿನಿಧಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು.
ಕಾರ್ಯಕ್ರಮದಲ್ಲಿ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರು ರಾಜೇಂದ್ರ, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ತೋಟೇಶ್, ನಗರಸಭೆ ಪೌರಯುಕ್ತರು ರುದ್ರಮ್ಮ ಶರಣಯ್ಯ, ತಾ.ಪಂ ಇಒ ಗುರುಶಾಂತಪ್ಪ ಬೆಳ್ಳುಂಡಗಿ, ನಗರಸಭೆ ಮಾಜಿ ಅಧ್ಯಕ್ಷ ರೇಖಾ, ಮಾಜಿ ಸದಸ್ಯರು, ಪೌರ ಕಾರ್ಮಿಕರ ಸಂಘದ ರಾಜಣ್ಣ ಹಾಗೂ ಇತರರು ಇದ್ದರು.
ವರದಿ- ನಿಂಪು ಸುರೇಶ್
![/* Change button hover color to red */
button:hover,
.wp-block-button__link:hover,
input[type="submit"]:hover {
background-color: red !important;
color: #fff !important; /* Makes text white for contrast */
}](https://rapower28.com/wp-content/uploads/2025/08/WhatsApp-Image-2025-08-23-at-7.28.55-AM-2-1024x454.jpeg)













