/* Change button hover color to red */
button:hover,
.wp-block-button__link:hover,
input[type="submit"]:hover {
    background-color: red !important;
    color: #fff !important; /* Makes text white for contrast */
}

  • Home
  • ಜಿಲ್ಲೆ
  • ಹನೂರು: ಜಿಲ್ಲಾಧಿಕಾರಿ ಶಿಲ್ಪನಾಗ್ ಭರವಸೆಯಿಂದ ಶಾಲೆಗೆ ಹಾಜರಾದ ಪೆದ್ದನಪಾಳ್ಯ ಶಾಲೆ ಮಕ್ಕಳು
Image

ಹನೂರು: ಜಿಲ್ಲಾಧಿಕಾರಿ ಶಿಲ್ಪನಾಗ್ ಭರವಸೆಯಿಂದ ಶಾಲೆಗೆ ಹಾಜರಾದ ಪೆದ್ದನಪಾಳ್ಯ ಶಾಲೆ ಮಕ್ಕಳು

ಹನೂರು ತಾಲ್ಲೂಕಿನ ಪೆದ್ದನಪಾಳ್ಯ ಗ್ರಾಮದಲ್ಲಿ ಇರುವ ಸರ್ಕಾರಿ ಶಾಲೆಯ ಜಾಗ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಪ್ರಕರಣ ನಡೆಯುತ್ತಿರುವ ಹಿನ್ನೆಲೆಯಲ್ಲಿ ಶಾಲಾ ಕಟ್ಟಡ ನಿರ್ಮಾಣ ಸಾಧ್ಯವಾಗಿಲ್ಲ. ಜೊತೆಗೆ ಕುಡಿಯುವ ನೀರು, ಶೌಚಗೃಹ ಸೌಲಭ್ಯಗಳಿಲ್ಲದ ಕಾರಣದಿಂದ ಆಗಸ್ಟ್ 11ರಿಂದ ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸುವುದನ್ನು ನಿಲ್ಲಿಸಿ ಪ್ರತಿಭಟನೆ ನಡೆಸುತ್ತಿದ್ದರು.
ಆ.14ರಂದು ಜಿಲ್ಲಾಮಟ್ಟದ ಅಧಿಕಾರಿಗಳಾದ ಜಿಪಂ ಸಿಇಒ ಮೋನಾ ರೋತ್, ಡಿಡಿಪಿಐ ರಾಮಚಂದ್ರರಾಜೇ ಅರಸ್, ತಹಸೀಲ್ದಾರ್ ಚೈತ್ರಾ, ಬಿಇಒ ಗುರುಲಿಂಗಯ್ಯ ಹಾಗೂ ತಾಪಂ ಇಒ ಉಮೇಶ್ ಅವರು ಗ್ರಾಮಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಸಮಸ್ಯೆ ಬಗೆಹರಿಸಲು ವಾಗ್ದಾನ ನೀಡಲಾಗಿದ್ದರೂ, ಸ್ಪಷ್ಟ ನಿರ್ಧಾರವಾಗದ ಕಾರಣ ಪೋಷಕರ ಅಸಮಾಧಾನ ಮುಂದುವರಿದಿತ್ತು.

ಬುಧವಾರದಂದು ಎಸ್‌ಡಿಎಂಸಿ ಅಧ್ಯಕ್ಷ ಪರಮೇಶ್ ಅವರು ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪಾನಾಗ್ ಅವರನ್ನು ಭೇಟಿ ಮಾಡಿ ಸಮಸ್ಯೆ ಪರಿಹಾರಕ್ಕೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಅವರು ನ್ಯಾಯಾಲಯದಲ್ಲಿರುವ ಪ್ರಕರಣವನ್ನು ಬಗೆಹರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಹಾಗೂ ತಾತ್ಕಾಲಿಕವಾಗಿ ಕೊಠಡಿಗಳನ್ನು ರಿಪೇರಿ ಮಾಡಲಾಗುವುದು ಎಂದು ಭರವಸೆ ನೀಡಿದರು.

ಒಟ್ಟು 62 ವಿದ್ಯಾರ್ಥಿಗಳ ಪೈಕಿ 50 ಮಕ್ಕಳು ಹಾಜರಿದ್ದು ಸಂತಸದ ವಿಚಾರವಾಗಿದೆ.

Releated Posts

ಕೊಳ್ಳೇಗಾಲ: ಪೌರಕಾರ್ಮಿಕರಿಗೆ ಊಟ ಬಡಿಸಿದ ಶಾಸಕ ಎ.ಆರ್. ಕೃಷ್ಣಮೂರ್ತಿ

ಕೊಳ್ಳೇಗಾಲ. ಸಮಾಜದಲ್ಲಿ ಕೊಳಕು ಮುಕ್ತ ಪ್ರದೇಶವಾಗಲು ಪೌರಕಾರ್ಮಿಕರು ಮುಖ್ಯ ಕಾರಣವಾಗಿದೆ ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ಅವರು ಹೇಳಿದರು. ಪಟ್ಟಣದ ಸಿಡಿಎಸ್ ಭವನದಲ್ಲಿ ಬುಧವಾರ ಪೌರ…

ByByN Rajesh Feb 11, 2026

ಕೊಳ್ಳೇಗಾಲ ನಗರಸಭೆ – ಜಿಲ್ಲಾಧಿಕಾರಿ ಶ್ರೀ ರೂಪ ಅವರಿಂದ ಉಳಿತಾಯ ಬಜೆಟ್ ಮಂಡನೆ

ಕೊಳ್ಳೇಗಾಲ ನಗರಸಭೆಯ ೨೦೨೬-೨೭ನೇ ಸಾಲಿನ ಬಜೆಟ್‌ನ ಪಕ್ಷಿ ನೋಟ ಕೊಳ್ಳೇಗಾಲ, ಫೆ, ೧೦- ಕೊಳ್ಳೇಗಾಲ ನಗರಸಭೆಯ ಸಭಾಂಗಣದಲ್ಲಿ ಶಾಸಕ ಎ.ಆರ್. ಕೃಷ್ಣಮೂರ್ತಿಯವರ ಅಧ್ಯಕ್ಷತೆಯಲ್ಲಿ ಫೆ.೧೦…

ByByN Rajesh Feb 10, 2026

ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನಿರ್ದೇಶಕರ ಅಯ್ಕೆ

ಕೊಳ್ಳೇಗಾಲ. ಸತ್ತೇಗಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಕ್ಕೆ ಭಾನುವಾರ ಚುನಾವಣೆ ನಡೆಯಿತು. ಗ್ರಾಮದಲ್ಲಿ ನಡೆದ ಚುನಾವಣೆಯಲ್ಲಿ 8…

ByByN Rajesh Feb 9, 2026

ಕೊಳ್ಳೇಗಾಲ : ಗ್ಯಾರೆಂಟಿ ಯೋಜನೆಗಳಿಂದ ನವ ಕರ್ನಾಟಕ ನಿರ್ಮಾಣ – ಶಾಸಕ ಎ.ಆರ್.ಕೃಷ್ಣಮೂರ್ತಿ

ಸರ್ಕಾರದ ಅಭಿವೃದ್ಧಿ ಯೋಜನೆ, ಕಾರ್ಯಕ್ರಮಗಳು ನವಕರ್ನಾಟಕ ನಿರ್ಮಾಣಕ್ಕೆ ಸಹಕಾರಿ: ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಕೊಳ್ಳೇಗಾಲ. ರಾಜ್ಯಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಜನರ ಅಭಿವೃದ್ಧಿಗಾಗಿ…

ByByN Rajesh Jan 17, 2026

Leave a Reply

Your email address will not be published. Required fields are marked *

Scroll to Top